ತಿರುವನಂತಪುರ: ಮುಸ್ಲಿಂ ಓಲೈಕೆ ರಾಜಕಾರಣಕ್ಕೆ ಪೂರಕ ಎಂಬಂತೆ ಕೇರಳದ ಸಿಎಂ ಪಿಣರಾಯಿ ವಿಜಯನ್ ಸರ್ಕಾರ, ಕೊರೋನಾ ಸಂಕಷ್ಟದ ಸಂದರ್ಭದಲ್ಲಿಯೂ ಕೊರೋನಾ ನಿಯಮಗಳನ್ನು ಸಡಿಲಗೊಳಿಸುವ ನಿರ್ಧಾರ ಕೈಗೊಂಡಿದೆ.
ಮುಸ್ಲಿಂ ಸಮುದಾಯದ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಕುರ್ಬಾನಿ ಆಚರಿಸಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಈ ವರೆಗೆ ವಿಧಿಸಲಾಗಿದ್ದ ಕೊರೋನಾ ನಿರ್ಬಂಧಗಳನ್ನು ಸಡಿಲಗೊಳಿಸಿದೆ. ಕೇರಳದಲ್ಲಿ ಕೊರೋನಾ ಸೋಂಕಿನ ತೀವ್ರತೆ ಇತರ ರಾಜ್ಯಗಳಿಗಿಂತ ಹೆಚ್ಚಾಗಿದ್ದು, ದಿನಕ್ಕೆ ಸುಮಾರು 13 ಸಾವಿರಗಳಷ್ಟು ಪ್ರಕರಣಗಳು ದಾಖಲಾಗುತ್ತಿದ್ದರೂ, ಬಕ್ರೀದ್ ಆಚರಣೆಗಾಗಿ ಕೊರೋನಾ ನಿಯಮಗಳನ್ನು ಸಡಿಲಿಸುವ ಮೂಲಕ ಸಾರ್ವಜನಿಕರ ಆರೋಗ್ಯದ ಮೇಲೆ ಚೆಲ್ಲಾಟವಾಡಲು ಮುಂದಾಗಿದೆ.
ಕೊರೋನಾ ಮೂರನೇ ಅಲೆಯ ಭೀತಿಯಿಂದ ಉತ್ತರಾಖಂಡ್ ರಾಜ್ಯ ಕನ್ವರ್ ಯಾತ್ರೆಯನ್ನು ರದ್ದು ಮಾಡಿದೆ. ಅಲ್ಲಿ ದೈನಂದಿನ ಪ್ರಕರಣ ಕೇವಲ 48. ರಾಜ್ಯದ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಅಲ್ಲಿನ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಈ ಮಹತ್ವದ ನಿರ್ಣಯ ಪ್ರಕಟಿಸಿದ್ದಾರೆ. ಆದರೆ ಕೇರಳ ರಾಜ್ಯದಲ್ಲಿ ದೇಶದ ಒಟ್ಟು ಕೊರೋನಾ ಸರಾಸರಿ ಪೈಕಿ 30% ಗಿಂತಲೂ ಅಧಿಕ ಪ್ರಕರಣಗಳಿದ್ದರೂ, ಬಕ್ರೀದ್ಗಾಗಿ ಕೊರೋನಾ ನಿಯಮಗಳನ್ನು ಸಡಿಲಗೊಳಿಸುವ ಮೂಲಕ ಒಂದು ವರ್ಗವನ್ನು ಓಲೈಸಲು ಮುಂದಾಗಿದೆ.
ಕೇರಳ ಸರ್ಕಾರದ ಈ ನಡೆಯಿಂದ ಕೊರೋನಾ ಸೋಂಕು ಏರಿಕೆಯಾಗುವ ಎಚ್ಚರಿಕೆಯನ್ನೂ ತಜ್ಞರು ನೀಡಿದ್ದಾರೆ. ಸರ್ಕಾರದ ನಿರ್ಣಯ ಇದೀಗ ಜನರಲ್ಲಿ ಹೊಸ ಆತಂಕವನ್ನು ಸೃಷ್ಟಿ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.