ನವದೆಹಲಿ: ಇಡೀ ಜಗತ್ತನ್ನು ಕೊರೋನಾ ಸಾಂಕ್ರಾಮಿಕ ರೋಗ ಬಾಧಿಸುತ್ತಿದೆ. ಕೊರೋನಾ ವಿರುದ್ಧದ ಹೋರಾಟಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಸಂಸತ್ ಅಧಿವೇಶನದಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಪ್ರಧಾನಿ ಮೋದಿ ಅವರು ತಿಳಿಸಿದ್ದಾರೆ.
ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಿಗೆ ಲಸಿಕೆಯನ್ನು ತೋಳಿಗೆ ನೀಡಲಾಗುತ್ತಿದೆ. ಲಸಿಕೆ ಪಡೆದುಕೊಂಡವರು ಬಾಹುಬಲಿಗಳಾಗಿದ್ದಾರೆ. ದೇಶದಲ್ಲಿ ಸುಮಾರು 40 ಕೋಟಿ ಜನರಿಗೆ ಲಸಿಕೆ ನೀಡಲಾಗಿದ್ದು, ಇದರಿಂದ ಕೊರೋನಾ ವಿರುದ್ಧ ಹೋರಾಟದಲ್ಲಿ ನಮ್ಮ ಶಕ್ತಿ ಮತ್ತಷ್ಟು ಹೆಚ್ಚಿದಂತಾಗಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೊರೋನಾ ಸೋಂಕಿಗೆ ಸಂಬಂಧಿಸಿದಂತೆ ಸಂಸತ್ನಲ್ಲಿ ಅರ್ಥಪೂರ್ಣ ಚರ್ಚೆ ಆಗಬೇಕಿದೆ. ಹೀಗಾಗಿ ಪ್ರಶ್ನೆಗೆ ಮತ್ತು ಅದಕ್ಕೆ ಉತ್ತರಿಸಲು ಸರ್ಕಾರಕ್ಕೆ ಅವಕಾಶ ನೀಡುವಂತೆ ಪ್ರತಿಪಕ್ಷಗಳಲ್ಲಿ ವಿನಂತಿ ಮಾಡುತ್ತಿದ್ದೇವೆ. ಒಂದು ಶಿಸ್ತುಬದ್ಧ ವಾತಾವರಣ ಈ ಅಧಿವೇಶನದಲ್ಲಿ ನಿರ್ಮಾಣವಾಗಲು ಸಹಕರಿಸುವಂತೆಯೂ ವಿನಂತಿಸಿದ್ದಾರೆ.
ಸಂಸತ್ತಿನಲ್ಲಿ ಮುಂಗಾರು ಅಧಿವೇಶನ ಇಂದು ಆರಂಭವಾಗಲಿದೆ. 19 ಬಾರಿ ಸಮಾವೇಶಗೊಳ್ಳಲಿರುವ ಅಧಿವೇಶನದಲ್ಲಿ 19 ಮಸೂದೆಗಳು, ಎರಡು ಹಣಕಾಸು ವಿಷಯಗಳು ಸೇರಿದಂತೆ ಒಟ್ಟು 31 ಸರ್ಕಾರಿ ವ್ಯವಹಾರ ವಿಷಯಗಳು ಪ್ರಸ್ತಾಪವಾಗಲಿವೆ.
ये सदन परिणामकारी हो, सार्थक चर्चा के लिए समर्पित हो, देश की जनता जो जवाब चाहती है वो जवाब देने के लिए सरकार की पूरी तैयारी है।
मैं सभी माननीय सांसदों,आग्रह करूंगा कि वो तीखे से तीखे सवाज पूछें, धारदार सवाल पूछें, लेकिन शांत वातावरण में सरकार को जवाब देने का मौका भी दें- पीएम pic.twitter.com/pSF2ifz1O0
— BJP (@BJP4India) July 19, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.