ಹುಬ್ಬಳ್ಳಿ: ಅಪರಾಧ ಪ್ರಕರಣಗಳ ಉತ್ತಮ ನಿರ್ವಹಣೆ ಮತ್ತು ತ್ವರಿತ ವಿಲೇವಾರಿಗಾಗಿ ಬಳ್ಳಾರಿಯಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯಗಳನ್ನು ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈಗಾಗಲೇ ಕಲ್ಬುರ್ಗಿಯಲ್ಲಿ ಪ್ರಯೋಗಾಲಯ ಇದ್ದು, ಇದು ಈ ಪ್ರದೇಶದ ಎರಡನೇ ಕೇಂದ್ರವಾಗಿದೆ. ಇದಕ್ಕಾಗಿ ಸರ್ಕಾರ 25 ಕೋಟಿ ರೂ. ಮಂಜೂರು ಮಾಡಿದೆ. ಸದ್ಯಕ್ಕೆ ಎಫ್ಎಸ್ಎಲ್ ಕೇಂದ್ರವು ತಾತ್ಕಾಲಿಕ ರಚನೆಯಿಂದ ಕಾರ್ಯ ನಿರ್ವಹಿಸಲಿದೆ. ಹೊಸ ಕೇಂದ್ರ ಕಲ್ಯಾಣ ಕರ್ನಾಟಕ ಪ್ರದೇಶದ ನಾಲ್ಕು ಜಿಲ್ಲೆಗಳಿಗೆ ಸಂಬಂಧಿಸಿದಂತೆ ಈ ಕೇಂದ್ರ ಕಾರ್ಯ ನಿರ್ವಹಿಸಲಿದೆ.
ಈ ಹಿಂದೆ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಗಳನ್ನು ದಾವಣಗೆರೆ, ಕಲ್ಬುರ್ಗಿಗೆ ಕೊಂಡೊಯ್ದು ಪರಿಶೀಲನೆ ಮಾಡಬೇಕಾಗಿತ್ತು. ಆದರೆ ಇದೀಗ ಬಳ್ಳಾರಿಯಲ್ಲೇ ಈ ಕೇಂದ್ರ ಸ್ಥಾಪನೆಯಾಗುತ್ತಿದ್ದು, ಇದರಿಂದ ಪೊಲೀಸರಿಗೆ ತಮ್ಮ ತನಿಖೆಗೆ ಸಂಬಂಧಿಸಿದಂತೆ ಇರುವ ಕೆಲಸಗಳನ್ನು ತ್ವರಿತವಾಗಿ ನಿರ್ವಹಿಸಲು ಅನುಕೂಲವಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.