ನವದೆಹಲಿ: ಲೋಕ ಸಭೆ ಮತ್ತು ರಾಜ್ಯ ಸಭೆಗಳಿಗೆ ನೂತನವಾಗಿ ಸೇರ್ಪಡೆಗೊಂಡ ಕೇಂದ್ರ ಸಚಿವರನ್ನು ಪರಿಚಯಿಸುವ ಸಂದರ್ಭದಲ್ಲಿ ವಿಪಕ್ಷಗಳು ಗದ್ದಲ ಎಬ್ಬಿಸಿದ್ದು, ಸಂಸತ್ತಿನಲ್ಲಿ ಇಂತಹ ನಕಾರಾತ್ಮಕ ಮನಸ್ಥಿತಿ ಹಿಂದೆಂದೂ ಕಂಡುಬಂದಿಲ್ಲ ಎಂದು ಪ್ರಧಾನಿ ಮೋದಿ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಹೊಸದಾಗಿ ಸಂಪುಟದಲ್ಲಿ ಸ್ಥಾನ ಪಡೆದವರ ಪರಿಚಯ ಮಾಡುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮುಂದಾದಾಗ ಪ್ರತಿಪಕ್ಷಗಳು ಘೋಷಣೆ ಕೂಗುತ್ತಾ, ಕೋಲಾಹಲ ಎಬ್ಬಿಸಿದರು. ಈ ಬಗ್ಗೆ ಮೋದಿ ಬೇಸರ ವ್ಯಕ್ತಪಡಿಸಿದ್ದು, ಈ ಬಾರಿ ಹಲವಾರು ಮಹಿಳೆಯರು, ಹಿಂದುಳಿದ ವರ್ಗಕ್ಕೆ ಸೇರಿದವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವುದು ಹೆಮ್ಮೆಯ ವಿಷಯ. ಇದನ್ನು ಹಲವರಿಗೆ ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆ ಕಾರಣದಿಂದ ಕಲಾಪಕ್ಕೆ ಅಡ್ಡಿ ಪಡಿಸುತ್ತಿದ್ದಾರೆ ಎಂದು ಅವರು ತಿಳಿಸಿದರು.
ದೇಶದ ಗ್ರಾಮೀಣ ಭಾಗದ ಜನರು, ಸಾಮಾನ್ಯ ಕುಟುಂಬದ ಜನರು ಸಚಿವರಾಗಿದ್ದಾರೆ. ಆದರೆ ಕೆಲವರು ಅವರನ್ನು ಪರಿಚಯಿಸುವುದನ್ನು ಬಯಸುವುದಿಲ್ಲ. ಅವರಿಗೆ ಮಹಿಳೆಯರಿಗೆ ಸ್ಥಾನಮಾನ ದೊರೆಯುವುದು ಇಷ್ಟವಿಲ್ಲ. ಮಹಿಳಾ ವಿರೋಧಿ ಮನೋಭಾವ ಹೊಂದಿದ್ದಾರೆ. ಈ ಹಿಂದೆಂದೂ ಸಂಸತ್ತಿನಲ್ಲಿ ಇಂತಹ ನಕಾರಾತ್ಮಕ ಮನಸ್ಥಿತಿ ಕಂಡುಬಂದಿಲ್ಲ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.