ನವದೆಹಲಿ: ಕೊರೋನಾ ಸೋಂಕಿನಿಂದ ಉಂಟಾದ ಸಂಕಷ್ಟಗಳು ರಾಜಕೀಯ ಮಾಡುವ ವಿಚಾರವಲ್ಲ. ಅದು ಮಾನವೀಯತೆಯ ನೆಲೆಯಲ್ಲಿ ಎದುರಿಸಬೇಕಾದ ಸಮಸ್ಯೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಬಿಜೆಪಿ ಸಂಸದೀಯ ಪಕ್ಷಗಳ ಸಭೆಯಲ್ಲಿ ಮಾತನಾಡಿದ ಅವರು, ಕೊರೋನಾ ಸಂಕಷ್ಟದ ಅವಧಿಯಲ್ಲಿ ದೇಶದ ಬಡ ಜನರು ಹಸಿವಿನಿಂದ ಬಳಲುವಂತಾಗಬಾರದು ಎಂಬ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.
ಇನ್ನು ಈ ಸಭೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬಹಳ ವರ್ಷಗಳ ಬಳಿಕ ಜಗತ್ತು ಇಂತಹ ಒಂದು ಪಿಡುಗಿಗೆ ತುತ್ತಾಗಿದೆ. ದೇಶದ ಬಡ ಜನರಿಗೆ ದೊಡ್ಡ ಸಂಖ್ಯೆಯಲ್ಲಿ ಪಡಿತರ ವಿತರಿಸಲಾಗಿದೆ. ಸಂಕಷ್ಟದ ಅವಧಿಯಲ್ಲಿ ಜನರಿಗೆ ನೆರವಾಗುವುದು ನಮ್ಮೆಲ್ಲರ ಕರ್ತವ್ಯ ಎಂದು ಮೋದಿ ತಿಳಿಸಿದ್ದಾಗಿ ಅವರು ಹೇಳಿದ್ದಾರೆ.
ಹಾಗೆಯೇ ಕೊರೋನಾ ಸೋಂಕನ್ನು ರಾಜಕೀಯ ಮಾಡುತ್ತಿರುವ ವಿಪಕ್ಷಗಳ ನಡೆಯ ಬಗ್ಗೆ ಮೋದಿ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷ ತಾನು ಅಧಿಕಾರಕ್ಕೆ ಏರುವ ಬಗ್ಗೆ ಇನ್ನೂ ಕನಸು ಕಾಣುತ್ತಲೇ ಇದೆ ಎಂದು ಜೋಶಿ ತಿಳಿಸಿದ್ದಾರೆ. ಕೊರೋನಾ ಬಗ್ಗೆ ಸರ್ಕಾರವನ್ನು ಇಕ್ಕಟ್ಟಿಗೆ ಗುರಿ ಮಾಡಲು ಹೊರಟಿರುವ ವಿಪಕ್ಷಗಳಿಗೆ ಸರಿಯಾದ ತಿರುಗೇಟು ನೀಡುವಂತೆ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.