ನವದೆಹಲಿ: ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯಲ್ಲಿ ಹಂಚಿಕೆಯಾದ ಅನುದಾನದ ಜೊತೆಗೆ, ಕೊರೋನಾ ಸಾಂಕ್ರಾಮಿಕ ನಿಯಂತ್ರಣ ಮತ್ತು ಆರೋಗ್ಯ ಮೂಲಸೌಕರ್ಯಗಳನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಸುಮಾರು 40 ಸಾವಿರ ಕೋಟಿ ರೂ. ಆರ್ಥಿಕ ಯೋಜನೆಗೆ ಅನುಮೋದನೆ ನೀಡಿದೆ.
ಲೋಕಸಭೆಯಲ್ಲಿ ಕೇಂದ್ರ ಸಚಿವ ನಿತ್ಯಾನಂದ ರಾಯ್ ಅವರು ಈ ವಿಚಾರ ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಕಾಲ ಕಾಲಕ್ಕೆ ಕೋವಿಡ್ 19 ಸಾರ್ವಜನಿಕ ಆರೋಗ್ಯ ಸವಾಲಿನ ನಿರ್ವಹಣೆ ಸೇರಿದಂತೆ ಸಂಪೂರ್ಣ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಆರ್ಥಿಕ ಸಹಾಯವನ್ನು ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ನಿರ್ಣಯ ಕೈಗೊಂಡಿದೆ.
2019 – 20 ರ ಕೊರೋನಾ ಅವಧಿಯಲ್ಲಿ 1113.21 ಕೋಟಿ ರೂ. ಹಣವನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿತ್ತು. ಹಾಗೆಯೇ ತುರ್ತು ಪ್ರತಿಕ್ರಿಯೆ, ಆರೋಗ್ಯ ವ್ಯವಸ್ಥೆಗೆ ಸಿದ್ಧತೆ ಪ್ಯಾಕೇಜ್ಗೆ ಅನುಮೋದನೆ ನೀಡಲಾಗಿದ್ದು, ಕೊರೋನಾ ವಿರುದ್ಧ ಹೋರಾಟಕ್ಕೆ 15 ಸಾವಿರ ಕೋಟಿ ರೂ. ಗಳ ಅನುದಾನ ಬಿಡುಗಡೆ ಮಾಡಲಾಗಿತ್ತು ಎಂದು ಹೇಳಿದ್ದಾರೆ.
2020 – 21 ರಲ್ಲಿ ಕೊರೋನಾ ನಿರ್ವಹಣೆ, ನಿಯಂತ್ರಣಕ್ಕಾಗಿ 8,257.88 ಕೋಟಿ ರೂ. ಗಳನ್ನು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಬಿಡುಗಡೆ ಮಾಡಲಾಗಿದೆ. ಎರಡನೇ ಹಂತದಲ್ಲಿ 23,123 ಕೋಟಿ ರೂ. ಗಳ ಜೊತೆಗೆ ಅನುಮೋದಿಸಲಾಗಿದೆ. ಔಷಧಗಳ ನಿರ್ವಹಣೆ, ಆಸ್ಪತ್ರೆ ನಿರ್ವಹಣೆ, ಟೆಲಿ ಸಮಾಲೋಚನೆ ವಿಸ್ತರಣೆ ಮೊದಲಾದ ವಿಚಾರಗಳಿಗೆ ಸಂಬಂಧಿಸಿದಂತೆ ಆರೋಗ್ಯ ಮೂಲಸೌಕರ್ಯಗಳ ಹೆಚ್ಚಳಕ್ಕೆ ಈ ಅನುದಾನ ನೀಡಿರುವುದಾಗಿ ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.