ನವದೆಹಲಿ: ಜುಲೈ 21 ರಿಂದ ಆಗಸ್ಟ್ 15 ರ ವರೆಗೂ ಕೆಂಪು ಕೋಟೆಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಭಾರತೀಯ ಪುರಾತತ್ವ ಇಲಾಖೆಯ ಸಮೀಕ್ಷೆ ತಿಳಿಸಿದೆ.
ಇಂದು ಮುಂಜಾನೆಯಿಂದ ಆಗಸ್ಟ್ ತಿಂಗಳ 15 ರ ವರೆಗೂ ಕೆಂಪು ಕೋಟೆಗೆ ಸಾರ್ವಜನಿಕರಿಗೆ ಪ್ರವೇಶ ಇಲ್ಲ ಎಂದು ಇಲಾಖೆಯ ಮೂಲಗಳು ತಿಳಿಸಿವೆ.
ಕೊರೋನಾ ಎರಡನೇ ಅಲೆ ದೇಶವನ್ನು ಸಂಕಷ್ಟಕ್ಕೆ ಒಳಗಾಗಿಸಿದೆ. ಈ ಹಿನ್ನೆಲೆಯಲ್ಲಿ ನವದೆಹಲಿ ಪೊಲೀಸರು ಸಾಂಕ್ರಾಮಿಕ ಸೋಂಕು ಕೋವಿಡ್ ಹರಡುವ ಭೀತಿಯಿಂದ ಮತ್ತು ಸೂಕ್ತ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಆಗಸ್ಟ್ 15 ರ ವರೆಗೂ ಕೆಂಪು ಕೋಟೆಗೆ ಸಾರ್ವಜನಿಕರ ಪ್ರವೇಶಕ್ಕೆ ಅನುಮತಿ ನೀಡದಂತೆ ಪತ್ರ ಬರೆದಿದ್ದರು. ಈ ಪತ್ರವನ್ನು ಪರಿಗಣಿಸಿ ಇಲಾಖೆ ಈ ಕ್ರಮ ಕೈಗೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.