ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ 2021 ರ ಜುಲೈ 1 ರಿಂದಲೇ ಅನ್ವಯವಾಗುವಂತೆ 11% ಗಳಷ್ಟು ತುಟ್ಟಿ ಭತ್ಯೆ ನೀಡುವಂತೆ ಸಿಎಂ ಯಡಿಯೂರಪ್ಪ ಅವರು ಹಣಕಾಸು ಇಲಾಖೆಗೆ ಸೂಚನೆ ನೀಡಿದ್ದಾರೆ.
11% ಗಳಷ್ಟು ತುಟ್ಟಿಭತ್ಯೆ ಹೆಚ್ಚಳದ ಆದೇಶ ಜಾರಿಯಾದಲ್ಲಿ ನೌಕರರ ಮೂಲ ವೇತನಕ್ಕೆ ಪೂರಕವಾಗಿ 22.25% ಗಳಷ್ಟು ತುಟ್ಟಿಭತ್ಯೆ ದೊರೆತಲಿದೆ.
ಕೊರೋನಾ ಹಿನ್ನೆಲೆಯಲ್ಲಿ 2020 ನೀಡಬೇಕಾಗಿದ್ದ ಮೂರು ತುಟ್ಟಿ ಭತ್ಯೆಗಳನ್ನು ಸರ್ಕಾರ ತಡೆಹಿಡಿದಿತ್ತು. ಕೇಂದ್ರ ಸರ್ಕಾರ ತನ್ನ ನೌಕರರಿಗೆ 11% ಗಳಷ್ಟು ತುಟ್ಟಿಭತ್ಯೆ ನೀಡುವ ತೀರ್ಮಾನ ಕೈಗೊಂಡಿತ್ತು. ಇದಾದ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರ ಸಂಘ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ತುಟ್ಟಿ ಭತ್ಯೆ ಹೆಚ್ಚಿಸುವಂತೆ ಮನವಿ ಮಾಡಿತ್ತು.
ಈ ಮನವಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಯಡಿಯೂರಪ್ಪ ಈ ವ್ಯವಸ್ಥೆಯನ್ನು ತಕ್ಷಣ ಜಾರಿಗೊಳಿಸುವಂತೆ ಸೂಚಿಸಿದ್ದಾರೆ. ಮುಂದಿನ ಎರಡು ಮೂರು ದಿನಗಳಲ್ಲಿ ಈ ಸಂಬಂಧ ಅಧಿಕೃತ ಆದೇಶ ಹೊರಬೀಳಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.