ಬೆಂಗಳೂರು: ಕೋವಿಡ್-19 ಚಿಕಿತ್ಸೆಯಲ್ಲಿ ತೊಡಗಿಸಿಕೊಂಡಿದ್ದ ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡೇತರ ಚಿಕಿತ್ಸೆಗಳನ್ನು ಪುನರ್ ಪ್ರಾರಂಭಿಸುವ ಕುರಿತು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಈ ಹಿನ್ನೆಲೆಯಲ್ಲಿ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ಸರ್ಕಾರಿ ಆಸ್ಪತ್ರೆಗಳಲ್ಲಿ ಮುಂದಿನ ದಿನಗಳಲ್ಲಿ ಕೋವಿಡೇತರ ರೋಗಿಗಳಿಗೂ ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದೆ. ಕೊರೋನಾ ಬಳಿಕ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಗಳಲ್ಲಿ ಕೋವಿಡೇತರ ರೋಗಿಗಳ ಚಿಕಿತ್ಸೆ ನಡೆಯದೇ ಇರುವುದು ಆತಂಕಕ್ಕೆ ಕಾರಣವಾಗಿದ್ದು, ಈ ಹಿನ್ನೆಲೆಯಲ್ಲಿ ಇತರರಿಗೂ ಚಿಕಿತ್ಸೆ ನೀಡುವುದನ್ನು ಮತ್ತೆ ಆರಂಭಿಸುವಂತೆ ಇಲಾಖೆ ಸುತ್ತೋಲೆಯಲ್ಲಿ ಹೇಳಿದೆ.
ಕೊರೋನಾ ಪೂರ್ವದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ನೀಡಲಾಗುತ್ತಿದ್ದ ಎಲ್ಲಾ ರೀತಿಯ ಚಿಕಿತ್ಸೆಗಳನ್ನು ಮತ್ತೆ ಆರಂಭಿಸಬೇಕು. ಆದರೆ ರಾಜ್ಯದಲ್ಲಿ ಕೊರೋನಾ ಸೋಂಕಿನ ಬಗೆಗೂ ಎಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ. ಕೊರೋನಾ ಆರೈಕೆ, ಚಿಕಿತ್ಸಾ ವಿಧಾನವನ್ನು ಮುಂದಿನ ಆದೇಶದ ವರೆಗೂ ಮಧ್ಯಮ ಸ್ಥಿತಿಯಲ್ಲಿ ಉಳಿಸಿಕೊಳ್ಳುವಂತೆ ಇಲಾಖೆ ತಿಳಿಸಿದೆ.
ಕೋವಿಡ್-19 ಚಿಕಿತ್ಸೆಯಲ್ಲಿ ತೊಡಗಿಸಿಕೊಂಡಿದ್ದ ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡೇತರ ಚಿಕಿತ್ಸೆಗಳನ್ನು ಪುನರ್ ಪ್ರಾರಂಭಿಸುವ ಕುರಿತು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.#KarnatakaFightsCorona@CMofKarnataka pic.twitter.com/b7sS7l4TYH
— DIPR Karnataka (@KarnatakaVarthe) July 22, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.