ಬೆಂಗಳೂರು: ವಸತಿ ರಹಿತರ ಸಂಖ್ಯೆ ರಾಜ್ಯದಲ್ಲಿ ಹೆಚ್ಚಾಗಿದ್ದು, ರಾತ್ರಿಯ ವೇಳೆ ಮಳೆ, ಗಾಳಿ, ಚಳಿಯಿಂದ ರಕ್ಷಣೆ ಮಾಡಿಕೊಳ್ಳಲು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಮುಂದಿನ 3 ತಿಂಗಳೊಳಗಾಗಿ 120 ನೈಟ್ ಶೆಲ್ಟರ್ಗಳನ್ನು ನಿರ್ಮಾಣ ಮಾಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಇದನ್ನು ರಾಷ್ಟ್ರೀಯ ನಗರ ಜೀವನೋಪಾಯ ಮಿಷನ್ ಅಡಿಯಲ್ಲಿ ನಿರ್ಮಾಣ ಮಾಡುವಂತೆ ಸೂಚಿಸಿದೆ. ಈ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ. ಎಸ್. ಒಕಾ ಅವರಿದ್ದ ವಿಭಾಗೀಯ ಪೀಠ ಪರಿಶೀಲಿಸಿ, ಬಳಿಕ ಈ ಸೂಚನೆಯನ್ನು ಹೊರಡಿಸಿದ್ದಾರೆ.
ಈ ಸಂಬಂಧ ನಡೆಸಲಾಗಿರುವ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ 1 ಲಕ್ಷಕ್ಕೂ ಅಧಿಕ ಜನಸಂಖ್ಯೆ ಇರುವ ನಗರಗಳಲ್ಲಿ ವಸತಿ ರಹಿತರಿಗೆ 166 ನೈಟ್ ಶೆಲ್ಟರ್ಗಳ ಅಗತ್ಯ ಇದೆ. ಈ ಹಿನ್ನೆಲೆಯಲ್ಲಿ 120 ಶೆಲ್ಟರ್ಗಳನ್ನು ಶೀಘ್ರ ಸ್ಥಾಪಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 3 ತಿಂಗಳೊಳಗಾಗಿ 42 ರಾತ್ರಿ ತಂಗುದಾಣ ಆರಂಭಿಸಬೇಕು. ಹಾಗೆಯೇ ಇನ್ನುಳಿದ 42 ಶೆಲ್ಟರ್ಗಳನ್ನು ಆರು ತಿಂಗಳಲ್ಲಿ ನಿರ್ಮಾಣ ಮಾಡುವಂತೆ ಸೂಚಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.