ಬೆಂಗಳೂರು: ನಗರವನ್ನು ಸಿಲಿಕಾನ್ ಸಿಟಿ ಮಾಡುವುದು, ದೇಶ ವಿದೇಶಗಳಿಂದ ಇಲ್ಲಿಗೆ ಆಗಮಿಸುವವರಿಗೆ ಇದೊಂದು ಪ್ರಶಸ್ತ ಪ್ರವಾಸಿ ತಾಣವಾಗಬೇಕು ಎಂಬ ಉದ್ದೇಶದಿಂದ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಸಿಎಂ ಅವರು ತಮ್ಮ ಸಹೋದ್ಯೋಗಿಗಳು ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳ ಜೊತೆಗೆ ಬೆಂಗಳೂರು ನಗರದಲ್ಲಿ ಸುತ್ತಾಟ ನಡೆಸಿದ್ದು, ಮುಂದಿನ 20 ವರ್ಷಗಳು ಕಳೆದರೂ ಹೊಂಡ, ಗುಂಡಿಗಳು ಬೀಳದಂತೆ ರಸ್ತೆಗಳ ದುರಸ್ತಿ ಕಾರ್ಯ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ರಾಜಕಾಲುವೆಗಳನ್ನು ಅಭಿವೃದ್ಧಿ ಮಾಡುವುದು, ಬೇರೆ ಕೆಲಸ ಕಾರ್ಯಗಳನ್ನು ಮಾಡುವುದರತ್ತಲೂ ಚಿತ್ತ ಹರಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ನಿಟ್ಟಿನಲ್ಲಿ ಕೈಗೊಳ್ಳುವ ಎಲ್ಲಾ ಕಾರ್ಯಗಳ ಮೇಲೂ ಮತ್ತಷ್ಟು ಗಮನ ಹರಿಸಲಾಗುವುದು ಎಂದು ಅವರು ತಿಳಿಸಿದರು. ಹಾಗೆಯೇ ಆರ್ಥಿಕ ತೊಂದರೆಗಳಾಗದಂತೆ ಕೆರೆ – ಕಟ್ಟೆಗಳು, ಪಾರ್ಕ್ಗಳು, ರಸ್ತೆಗಳು ಹೀಗೆ ಸಮಗ್ರ ಬೆಂಗಳೂರು ಅಭಿವೃದ್ಧಿಯ ಉದ್ದೇಶದಿಂದ ಕೆಲಸ ಮಾಡಲು ಕಟೀಬದ್ಧರಾಗಿದ್ದೇವೆ ಎಂದು ಅವರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸ್ಮಾರ್ಟ್ ಸಿಟಿ, ಟೆಂಡರ್ ಶ್ಯೂರ್ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಮುಖ್ಯಮಂತ್ರಿ @BSYBJP ರವರು ಇಂದು ಬೆಂಗಳೂರು ನಗರದಲ್ಲಿ ಸ್ಮಾರ್ಟ್ ಸಿಟಿ ಹಾಗೂ ಟೆಂಡರ್ ಶ್ಯೂರ್ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಉಪಮುಖ್ಯಮಂತ್ರಿ @drashwathcn, ಸಚಿವರಾದ @RAshokaBJP, @BABasavaraja, @VSOMANNA_BJP, @ArvindLBJP, @BBMPCOMM ಗೌರವ್ ಗುಪ್ತಾ ಮತ್ತಿತರರು ಉಪಸ್ಥಿತರಿದ್ದರು.#BengaluruMission2022 pic.twitter.com/7z7OHmsSl0
— CM of Karnataka (@CMofKarnataka) July 23, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.