ನವದೆಹಲಿ: ಕೊರೋನಾ ಸೋಂಕಿತರ ಚಿಕಿತ್ಸೆಗೆ ಸಂಬಂಧಿಸಿದಂತೆ ಆಕ್ಸಿಜನ್ ಎಕ್ಸ್ಪ್ರೆಸ್ ಮೂಲಕ 200 ಟನ್ ಆಮ್ಲಜನಕವನ್ನು ನೆರೆಯ ಬಾಂಗ್ಲಾದೇಶಕ್ಕೆ ತಲುಪಿಸಲು ಭಾರತೀಯ ರೈಲ್ವೆ ಸಿದ್ಧತೆ ನಡೆಸಿದೆ.
ಕೊರೋನಾ ಸಂದರ್ಭದಲ್ಲಿ ಪರಸ್ಪರ ಸಹಕಾರ. ಮನೋಭಾವದಿಂದ ಕಾರ್ಯ ನಿರ್ವಹಿಸುತ್ತಿರುವ ಪ್ರಧಾನಿ ಮೋದಿ ಸರ್ಕಾರ, ಇದೀಗ ಬಾಂಗ್ಲಾ ದೇಶಕ್ಕೂ ತನ್ನ ನೆರವಿನ ಹಸ್ತ ಚಾಚುತ್ತಿದೆ. ಆಕ್ಸಿಜನ್ ಸಮಸ್ಯೆಯಿಂದ ಬಾಂಗ್ಲಾದೇಶಕ್ಕೆ ಸಹಾಯಹಸ್ತವನ್ನು ಚಾಚಲು ಸಿದ್ಧತೆ ಮಾಡಿದೆ.
ಮೆಡಿಕಲ್ ಆಕ್ಸಿಜನ್ ಹೊತ್ತ ಈ ರೈಲು ಭಾನುವಾರ ತನ್ನ ಪ್ರಯಾಣವನ್ನು ಬಾಂಗ್ಲಾದೇಶಕ್ಕೆ ಆರಂಭಿಸಲಿದೆ. ಕೊರೋನಾ ಸಂಕಷ್ಟದ ನಡುವೆಯೂ ಭಾರತ ಈ ವರೆಗೆ ಹಲವಾರು ನೆರೆಯ ರಾಷ್ಟ್ರಗಳಿಗೆ ವೈದ್ಯಕೀಯ ಸಲಕರಣೆಗಳನ್ನು ಮಾನವೀಯತೆಯ ಆಧಾರದ ಮೇಲೆ ನೀಡಿದೆ. ಇದೀಗ ಬಾಂಗ್ಲಾ ದೇಶಕ್ಕೆ ಮೆಡಿಕಲ್ ಆಕ್ಸಿಜನ್ ನೀಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.