ಬೆಂಗಳೂರು: ಮುಂದಿನ ದಿನಗಳಲ್ಲಿ ಮನೆಯಿಂದಲೇ ಹೊಸ ವಾಹನದ ವಿಮಾ ಯೋಜನೆ ಸೌಲಭ್ಯ ಒದಗಿಸುವುದಕ್ಕೆ, ಈಗಿರುವ ವಿಮಾ ಯೋಜನೆಯ ನವೀಕರಣಕ್ಕೆ ಅನುಕೂಲ ಕಲ್ಪಿಸುವ ಯೋಜನೆಯನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯ ಅಂಚೆ ಇಲಾಖೆ ಮುಂದಾಗಿದೆ.
ರಾಜ್ಯದ ಸುಮಾರು 3 ಸಾವಿರ ಅಂಚೆ ಸಿಬ್ಬಂದಿಗೆ ಈಗಾಗಲೇ ಈ ಸಂಬಂಧ ತರಬೇತಿ ನೀಡಲಾಗಿದ್ದು, ಈ ವಿಮಾ ಬುಕ್ಕಿಂಗ್ ಕೆಲಸವನ್ನು ಅವರು ನಡೆಸಲಿದ್ದಾರೆ. ಮೈಕ್ರೋ ಎಟಿಎಂಗಳ ಮೂಲಕ ಈ ಸೇವೆಯನ್ನು ನೀಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಮಾ ನಿಯಂತ್ರಣ ಅಭಿವೃದ್ಧಿ ಪ್ರಾಧಿಕಾರ ಸಹ ಈ ಕ್ರಮಕ್ಕೆ ಹಸಿರು ನಿಶಾನೆ ನೀಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ನಗರ ಪ್ರದೇಶಗಳಲ್ಲಿ ಜನರು ಅವಧಿಗೂ ಮುನ್ನವೇ ಜನರು ವಿಮೆ ಯೋಜನೆಯನ್ನು ನವೀಕರಣ ಮಾಡುತ್ತಾರೆ. ಆದರೆ ಗ್ರಾಮೀಣ ಭಾಗದಲ್ಲಿ ತಡವಾಗುತ್ತದೆ. ಇದರಿಂದ ವಿಮಾ ಯೋಜನೆ ಕಳೆದು ಹೋಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನಾಗರಿಕರ ಮನೆ ಬಾಗಿಲಿಗೆಯೇ ಸೇವೆಯನ್ನು ತಲುಪಿಸಿದಲ್ಲಿ ಜನರಿಗೆ ಹೆಚ್ಚು ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಇಂತಹ ಕ್ರಮಕ್ಕೆ ಮುಂದಾಗಿರುವುದಾಗಿ ಅಂಚೆ ಇಲಾಖೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.