ಮೈಸೂರು: ರಾಜ್ಯದ ರೈತರಿಗೆ ಡಿಸಿಸಿ ಬ್ಯಾಂಕ್ ಮತ್ತು ಎಫೆಕ್ಸ್ ಬ್ಯಾಂಕ್ಗಳ ಮೂಲಕ 20,800 ಕೋಟಿ ರೂ. ಸಾಲ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಎಸ್. ಟಿ. ಸೋಮಶೇಖರ್ ತಿಳಿಸಿದ್ದಾರೆ.
ಈ ಯೋಜನೆಯಿಂದ ರಾಜ್ಯದ ಸುಮಾರು 30 ಲಕ್ಷ ರೈತರು ಅನುಕೂಲ ಪಡೆಯಲಿದ್ದಾರೆ. ರೈತರಿಗೆ ಸಹಕಾರ ನೀಡುವ ಉದ್ದೇಶದಿಂದ ರಾಜ್ಯದ ಪ್ರತಿ ಎಪಿಎಂಸಿಗೆ 2 – 5 ಕೋಟಿ ರೂ ನೀಡಲು ರಾಜ್ಯ ಸರ್ಕಾರ ಸಮ್ಮತಿಸಿದೆ. ಆ ಮೂಲಕ ಎಪಿಎಂಸಿಗಳನ್ನು ಬಳಸಿಕೊಂಡು ರೈತರಿಗೆ ನೆರವಾಗಲು ಸರ್ಕಾರ ಚಿಂತಿಸಿದೆ ಎಂದು ಅವರು ಹೇಳಿದ್ದಾರೆ.
ಹಾಗೆಯೇ ಸಹಕಾರಿ ಬ್ಯಾಂಕ್ ಮೂಲಕ 20,800 ಕೋಟಿ ರೂ. ಸಾಲ ನೀಡಲು ಸರ್ಕಾರ ನಿರ್ಧಾರ ಕೈಗೊಂಡಿದೆ. ಆ ಮೂಲಕ ರಾಜ್ಯದ ಬಡ ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಂಡಿರುವುದಾಗಿ ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.