ಬೆಂಗಳೂರು: ರಾಜ್ಯದಲ್ಲಿ ಕಳೆದ ಬಾರಿಯ ನೆರೆ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ 629 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.
ಕಳೆದ ಬಾರಿಯ ಅತಿವೃಷ್ಟಿಯಿಂದ ಅಪಾರ ಪ್ರಮಾಣದಲ್ಲಿ ಬೆಳೆ, ಆಸ್ತಿ ಪಾಸ್ತಿ ಗಳಿಗೆ ನಷ್ಟ ಸಂಭವಿಸಿತ್ತು. ಈ ಹಿನ್ನೆಲೆಯಲ್ಲಿ ಪರಿಹಾರವಾಗಿ 629 ಕೋಟಿ ರೂ. ಗಳನ್ನು ಬಿಡುಗಡೆ ಮಾಡಲಾಗಿದ್ದು, ಎಸ್ಡಿಆರ್ಎಫ್ ನಿಧಿಗೆ ಈ ಮೊತ್ತವನ್ನು ನೀಡಲಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಟ್ವೀಟ್ ಮಾಡಿದ್ದಾರೆ. ಮಹಾರಾಷ್ಟ್ರಕ್ಕೆ 701 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಹಾಗೆಯೇ ರಾಜಸ್ಥಾನಕ್ಕೆ 113 ಕೋಟಿ ರೂ., 2020-21 ನೇ ಸಾಲಿನಲ್ಲಿ ಬೆಳೆ ನಷ್ಟ ಅನುಭವಿಸಿದ ಮಹಾರಾಷ್ಟ್ರಕ್ಕೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ 750 ಕೋಟಿ ರೂ. ಪರಿಹಾರ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ರೈತರ ಕಲ್ಯಾಣಕ್ಕಾಗಿ ಭಾರತ ಸರ್ಕಾರ ಸದಾ ಸಿದ್ಧ ಎಂದು ಕರಂದ್ಲಾಜೆ ಹೇಳಿದ್ದಾರೆ.
During 20-21, i.e. Kharif & Rabi season, over 67.96 lakh hectare area of Maharashtra has been insured under Pradhan Mantri Fasal Bima Yojana(@pmfby).
For which ₹750.12 Cr has been paid benefiting 11.43L farmers.
GOI is commited for the welfare of our farmers.@PIBMumbai
3/3— Shobha Karandlaje (@ShobhaBJP) July 27, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.