ಬೆಂಗಳೂರು: ರೈತರ ಕೃಷಿ ಉತ್ಪನ್ನಗಳನ್ನು ಒಂದೆಡೆಯಿಂದ ಮತ್ತೊಂದೆಡೆಗೆ ಸಾಗಿಸಲು ಸಂಸ್ಥೆಯ ಬಸ್ಸುಗಳನ್ನು ಬಳಕೆ ಮಾಡಲು ಸಂಸ್ಥೆ ಮುಂದಾಗಿದೆ. ಇದಕ್ಕಾಗಿ ಎಸಿ ಬಸ್ಸುಗಳನ್ನೇ ಮರುವಿನ್ಯಾಸಗೊಳಿಸುವ ಕೆಲಸವನ್ನು ಕೆಎಸ್ಆರ್ಟಿಸಿ ಮಾಡುತ್ತಿದೆ.
ಇದಕ್ಕಾಗಿ 11 ರಿಂದ 12 ಲಕ್ಷ ಕಿಮೀ. ಸಂಚರಿಸಿದ ಸದ್ಯ ಬಳಕೆಯಲ್ಲಿಲ್ಲದ ಹವಾನಿಯಂತ್ರಿತ ಬಸ್ಸುಗಳನ್ನು ಬಳಕೆ ಮಾಡಲಾಗುತ್ತದೆ. ಮೊದಲ ಹಂತದಲ್ಲಿ ಚಿಕ್ಕಬಳ್ಳಾಪುರ, ಕೋಲಾರ, ಹೊಸಕೋಟೆ, ಬೆಂಗಳೂರುಗಳಿಗೆ ಸಂಬಂಧಿಸಿದಂತೆ ಈ ಬಸ್ಸುಗಳನ್ನು ಕಾರ್ಯಾಚರಿಸಲು ನಿಗಮ ಸಿದ್ಧತೆ ನಡೆಸಿದೆ. ಈ ಬಸ್ಸುಗಳನ್ನು ಪ್ರಾಯೋಗಿಕವಾಗಿ ಒಂದು ತಿಂಗಳ ಕಾಲ ಕಾರ್ಯಾಚರಣೆ ಮಾಡಿ ಫಲಿತಾಂಶ ನೋಡುವುದಾಗಿ ಸಂಸ್ಥೆ ಹೇಳಿದೆ. ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಸಂಸ್ಥೆ ಅಭಿಪ್ರಾಯ ವ್ಯಕ್ತಪಡಿಸಿದೆ.
ಈ ಸೇವೆಯನ್ನು ಗುತ್ತಿಗೆ ಆಧಾರದಲ್ಲಿ ನೀಡಲು ಸಂಸ್ಥೆ ಚಿಂತನೆ ನಡೆಸಿದೆ. ರೈತರ ಗುಂಪುಗಳು, ಸಹಕಾರ ಸಂಸ್ಥೆಗಳು ಇದನ್ನು ಗುತ್ತಿಗೆ ಆಧಾರದಲ್ಲಿ ಪಡೆದುಕೊಂಡು ಬಳಕೆ ಮಾಡಬಹುದು ಎಂದು ಸಂಸ್ಥೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.