ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸರ್ಕಾರ ರಾಜ್ಯದ ಬಡ ವರ್ಗಗಳನ್ನು ಗಮನದಲ್ಲಿಟ್ಟುಕೊಂಡು ಉಚಿತ ವೈದ್ಯಕೀಯ ನೆರವು ಒದಗಿಸುವ ಅಭಿಯಾನ ಆರಂಭಿಸಿದೆ.
ಬಡ ವರ್ಗಗಳಿಗೆ ಗೋಲ್ಡನ್ ಕಾರ್ಡ್ಗಳನ್ನು ಒದಗಿಸುವ ಮೂಲಕ ಈ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಈ ಕಾರ್ಡ್ ಬಳಸಿಕೊಂಡು ದೇಶದ ಯಾವುದೇ ಭಾಗಗಳಲ್ಲಿಯೂ ಫಲಾನುಭವಿಗಳು 5 ಲಕ್ಷ ರೂ. ವರೆಗಿನ ಚಿಕಿತ್ಸೆ ಉಚಿತವಾಗಿ ಪಡೆಯಬಹುದು. ಈ ಗೋಲ್ಡನ್ ಕಾರ್ಡ್ಗಳನ್ನು ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡುಗಳನ್ನು ಹೊಂದಿರದ ಫಲಾನುಭವಿಗಳಿಗೆ ನೀಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.
ಈ ಅಭಿಯಾನದ ಮೊದಲ ದಿನ ಸುಮಾರು 26,000 ಕ್ಕೂ ಅಧಿಕ ಕುಟುಂಬಗಳಿಗೆ ಗೋಲ್ಡನ್ ಕಾರ್ಡ್ ವಿತರಣೆ ಮಾಡಲಾಗಿದೆ. ಈ ವರೆಗೆ ಒಟ್ಟು 6 .5 ಕೋಟಿ ಫಲಾನುಭವಿಗಳಿಗೆ ಸರ್ಕಾರ ಗೋಲ್ಡನ್ ಕಾರ್ಡ್ಗಳನ್ನು ವಿತರಣೆ ಮಾಡಿದೆ. ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆಯಿಂದ ವಂಚಿತರಾದ ರಾಜ್ಯದ 40 ಲಕ್ಷಕ್ಕೂ ಅಧಿಕ ಜನರನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆ ರೂಪಿಸಲಾಗಿದೆ.
ರಾಜ್ಯದ ಬಡ ವರ್ಗಗಳ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ಮತ್ತು ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಈ ಯೋಜನೆ ಮಹತ್ವ ಪಡೆದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.