ನವದೆಹಲಿ : ರಾಷ್ಟ್ರೀಯ ಶಿಕ್ಷಣ ನೀತಿ-2020 ರ ಸುಧಾರಣೆಗಳ ಜಾರಿಯ ಮೊದಲ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೇಶಾದ್ಯಂತ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ನೀತಿ ನಿರೂಪಕರು, ವಿದ್ಯಾರ್ಥಿಗಳು, ಶಿಕ್ಷಕರನ್ನು ಉದ್ದೇಶಿಸಿ ವಿಡಿಯೋ ಕಾನ್ಪರೆನ್ಸ್ ಮೂಲಕ ಮಾತನಾಡಲಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಅವರು ಈ ಸಂದರ್ಭದಲ್ಲಿ ಅನೇಕ ಉಪಕ್ರಮಗಳನ್ನು ಪ್ರಾರಂಭಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಸುಮಾರು 300 ಉನ್ನತ ಸಂಸ್ಥೆಗಳಿಗೆ ಅಕಾಡೆಮಿಕ್ ಬ್ಯಾಂಕ್ ಆಫ್ ಕ್ರಿಡಿಟ್ ಅನ್ನು ಪ್ರಾರಂಭಿಸಲಿದ್ದು, ಇದು ಉನ್ನತ ಶಿಕ್ಷಣದ ವಿದ್ಯಾರ್ಥಿಗಳಿಗೆ ಬಹು ಹಂತದ ಪ್ರವೇಶ ಮತ್ತು ನಿರ್ಗಮನದ ಆಯ್ಕೆಗಳನ್ನು ಒದಗಿಸುತ್ತದೆ. ಮೊದಲ ವರ್ಷದ ಪ್ರಾದೇಶಿಕ ಭಾಷೆಯ ಎಂಜಿನಿಯರಿಂಗ್ ಕಾರ್ಯಕ್ರಮಗಳು ಮತ್ತು ಉನ್ನತ ಶಿಕ್ಷಣದಲ್ಲಿ ಅಂತಾರಾಷ್ಟ್ರೀಯ ಕ್ಷೇತ್ರದ ಮಾರ್ಗಸೂಚಿಗಳನ್ನು ಸಹ ಪ್ರಕಟಿಸಲಿದ್ದಾರೆ.
ಗ್ರೇಡ್ – 1 ವಿದ್ಯಾರ್ಥಿಗಳಿಗಾಗಿ ಮೂರು ತಿಂಗಳ ನಾಟಕ ಆಧಾರಿತ ಶಾಲಾ ತಯಾರಿ ಮಾದರಿ ವಿದ್ಯಾಪ್ರವೇಶ್ ಉಪಕ್ರಮಗಳಿಗೂ ಚಾಲನೆ ನೀಡಲಿದ್ದಾರೆ. ಮಾಧ್ಯಮಿಕ ಹಂತದಲ್ಲಿ ಭಾರತೀಯ ಸಂಕೇತ ಭಾಷೆ, ಎನ್.ಸಿ.ಇ.ಆರ್.ಟಿ. ವಿನ್ಯಾಸಗೊಳಿಸಿರುವ ಸಮಗ್ರ ತರಬೇತಿ ಕಾರ್ಯಕ್ರಮ, ನಿಶಾಂತ 2.0, ಸಫಲ್ [ ಸ್ಟ್ರಕ್ಚರ್ ಅಸೆಸ್ ಮೆಂಟ್ ಫಾರ್ ಅನಲೈಜಿಂಗ್ ಲರ್ನಿಂಗ್ ಲೆವೆಲ್ಸ್], ಸಿ.ಬಿ.ಎಸ್.ಸಿ ಶಾಲೆಗಳಲ್ಲಿ 3, 5 ಮತ್ತು 8 ನೇ ತರಗತಿಗಳಲ್ಲಿ ಸಾಮರ್ಥ್ಯ ಆಧಾರಿತ ಮೌಲ್ಯಮಾಪನ ಚೌಕಟ್ಟು ಮತ್ತು ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಗಾಗಿ ಮೀಸಲಾದ ವೆಬ್ ಸೈಟ್ ಬಿಡುಗಡೆ ಸಹ ಈ ಉಪಕ್ರಮಗಳ ಪಟ್ಟಿಯಲ್ಲಿ ಸೇರಿದೆ.
ಕಾರ್ಯಕ್ರಮದಲ್ಲಿ ನ್ಯಾಷನಲ್ ಡಿಟಿಟಲ್ ಎಜುಕೇಷನ್ ಆರ್ಕಿಟೆಕ್ಚರ್ (ಎನ್.ಡಿ.ಇ.ಎ.ಆರ್) ಮತ್ತು ನ್ಯಾಷನಲ್ ಎಜುಕೇಷನ್ ಟೆಕ್ನಾಲಜಿ ಪೋರಂ (ಎನ್.ಇ.ಟಿ.ಎಫ್) ಅನ್ನು ಸಹ ಉದ್ಘಾಟಿಸಲಾಗುತ್ತಿದೆ.
ಈ ಉಪಕ್ರಮಗಳು ಎನ್.ಇ.ಪಿ -2020 ರ ಗುರಿಗಳ ಸಾಕಾರಕ್ಕೆ ಮಹತ್ವದ ಹೆಜ್ಜೆಯನ್ನು ಸೂಚಿಸುತ್ತದೆ ಮತ್ತು ಶಿಕ್ಷಣ ಕ್ಷೇತ್ರವನ್ನು ಹೆಚ್ಚು ಸ್ಪಂದನೀಯವಾಗಿಸುವ ಜತೆಗೆ ಕೈಗೆಟುವಂತೆ ಮಾಡುತ್ತದೆ.
2020 ರ ಎನ್.ಇ.ಪಿ ಕಲಿಕೆಯ ಚೌಕಟ್ಟನ್ನು ಬದಲಿಸುವ ತತ್ವಶಾಸ್ತ್ರದ ಮಾರ್ಗದರ್ಶಿಯಾಗಿದ್ದು, ಆತ್ಮನಿರ್ಭರ ಭಾರತಕ್ಕೆ ಬಲವಾದ ಅಡಿಪಾಯ ನಿರ್ಮಿಸಲಿದೆ.
ಇದು 21 ನೇ ಶತಮಾನದ ಮೊದಲ ಶಿಕ್ಷಣ ನೀತಿಯಾಗಿದೆ ಮತ್ತು 1986 ರ [ಎನ್.ಇ.ಪಿ] 34 ವರ್ಷದ ಹಳೆಯ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಬದಲಿಸಲಿದೆ. ಪ್ರವೇಶಿಸುವ, ಕೈಗೆಟುಕುವ, ನೀತಿ, ಗುಣಮಟ್ಟ ಮತ್ತು ಉತ್ತರದಾಯಿತ್ವ ಎಂಬ ಐದು ಆಧಾರ ಸ್ಥಂಭಗಳಿಂದ ಇದನ್ನು ಕಟ್ಟಲಾಗಿದ್ದು, 2030 ರ ಸುಸ್ಥಿರ ಅಭಿವೃದ್ಧಿಯ ಕಾರ್ಯಸೂಚಿಯನ್ನು ಇದು ಒಳಗೊಂಡಿದೆ. ಉಜ್ವಲ ಜ್ಞಾನ ಸಮಾಜವನ್ನಾಗಿ ಭಾರತವನ್ನು ಬದಲಿಸುವ ಗುರಿ ಹೊಂದಲಾಗಿದೆ. ಶಾಲೆ ಮತ್ತು ಕಾಲೇಜು ಶಿಕ್ಷಣವನ್ನು ಹೆಚ್ಚು ಸಮಗ್ರ, ಹೊಂದಿಕೊಳ್ಳುವಂತೆ, ಬಹುಶಿಸ್ತಿನ ಜಾಗತಿಕ ಜ್ಞಾನದ ಮಹಾಶಕ್ತಿಯನ್ನಾಗಿ ರೂಪಿಸುವ ಗುರಿ ಹೊಂದಲಾಗಿದ್ದು, 21 ನೇ ಶತಮಾನದ ಅಗತ್ಯಗಳಿಗೆ ಇದು ಸೂಕ್ತವಾಗಲಿದೆ. ಪ್ರತಿಯೊಬ್ಬ ವಿದ್ಯಾರ್ಥಿಯ ವಿಶಿಷ್ಟ ಸಾಮರ್ಥ್ಯಗಳನ್ನು ಹೊರತರುವ ಉದ್ದೇಶವನ್ನು ಹೊಂದಲಾಗಿದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಶಿಕ್ಷಣ ಸಚಿವರು ಸಹ ಉಪಸ್ಥಿತರಿರಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.