ನವದೆಹಲಿ: ಪ್ರವಾಹ, ಚಂಡಮಾರುತಗಳನ್ನೊಳಗೊಂಡಂತೆ ಪ್ರಾಕೃತಿಕ ವಿಕೋಪಗಳ ಬಗ್ಗೆ ಮೊದಲೇ ಗ್ರಹಿಸುವುದಕ್ಕೆ ಪೂರಕವಾದ ಇಒಎಸ್-3 ಉಪಗ್ರಹವನ್ನು 2021 ನೇ ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಉಡಾಯಿಸುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.
ಈ ಉಪಗ್ರಹವು ದೇಶದ ಭೌಗೋಳಿಕ ವ್ಯಾಪ್ತಿಯನ್ನು ದೈನಂದಿನವಾಗಿ 4 -5 ಬಾರಿ ಸೆರೆ ಹಿಡಿಯುವ ಸಾಮರ್ಥ್ಯವನ್ನು ಒಳಗೊಂಡಿದೆ.
ಈ ಉಪಗ್ರಹ ಪ್ರಾಕೃತಿಕ ವಿಕೋಪಗಳ ಜೊತೆಗೆ ಜಲಮೂಲಗಳು, ಬೆಳೆ, ಅರಣ್ಯ ನಾಶ, ಬೆಳವಣಿಗೆ ಮೊದಲಾದವುಗಳಿಗೆ ಸಂಬಂಧಿಸಿದಂತೆಯೂ ಮಾಹಿತಿ ಕಲೆ ಹಾಕಲಿದೆ. ಸ್ವದೇಶಿ ನಿರ್ಮಿತ ಈ ಉಪಗ್ರಹದ ಎಸ್ಎಸ್ಎಲ್ವಿ ಪ್ರಯೋಗವನ್ನು 2021 ರ ನಾಲ್ಕನೇ ತ್ರೈಮಾಸಿಕದಲ್ಲಿ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾಯಿಸಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.