ನವದೆಹಲಿ: ವಿವಿಧ ವಿಚಾರಗಳನ್ನಿಟ್ಟುಕೊಂಡು ಸದನದಲ್ಲಿ ಕೆಲವು ಸಂಸದರು ನಡೆಸುತ್ತಿರುವ ಪ್ರತಿಭಟನೆ, ನಡೆದುಕೊಳ್ಳುವ ರೀತಿಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ರಾಜ್ಯಸಭೆಯ ಸಭಾಪತಿ ವೆಂಕಯ್ಯ ನಾಯ್ಡು, ಇದೇ ರೀತಿಯ ವರ್ತನೆ ಮುಂದುವರಿದಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಸದನದ ಕಲಾಪದಲ್ಲಿ ಕೆಲ ಸಂಸದರು ಶಿಳ್ಳೆ ಹೊಡೆಯುವುದು, ವಿಚಾರ ಮಂಡನೆಯ ಸಮಯದಲ್ಲಿ ಫಲಕಗಳನ್ನು ಹಿಡಿದು ಅಡ್ಡಿ ಮಾಡುವುದು ಮೊದಲಾದ ಅಂಶಗಳ ಬಗ್ಗೆ ನಾಯ್ಡು ಕಳವಳ ವ್ಯಕ್ತಪಡಿಸಿದ್ದಾರೆ. ಸಂಸತ್ ಸದಸ್ಯರ ಇಂತಹಾ ನಡವಳಿಕೆಯಿಂದ ಸದನದ ಗೌರವಕ್ಕೆ ಚ್ಯುತಿ ಬರುತ್ತದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸದನದಲ್ಲಿ ಸಂಸದರು ಶಿಷ್ಟಾಚಾರ, ಸಭ್ಯತೆ ಕಾಪಾಡಿಕೊಳ್ಳುವಂತೆಯೂ ಅವರು ಮನವಿ ಮಾಡಿದ್ದಾರೆ. ತಾಳ್ಮೆಗೂ ಒಂದು ಮಿತಿ ಇದ್ದು, ಸದನದ ಗೌರವಕ್ಕೆ ಚ್ಯುತಿಯಾಗದಂತೆ ನಡೆದುಕೊಳ್ಳಬೇಕು ಎಂದು ಸೂಚಿಸಿದರು. ಸಮಸ್ಯೆಗಳ ಬಗ್ಗೆ ಪ್ರತಿಭಟನೆ ನಡೆಸುವುದು ಸರಿ. ಆದರೆ ಅದರ ಮೂಲಕವೇ ಸಂಸತ್ ಗೌರವ ಹರಾಜು ಮಾಡುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.