ನವದೆಹಲಿ: ಭಯೋತ್ಪಾದನೆಗೆ ಹಣಕಾಸು ನೆರವು ಒದಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಇಂದು ಬೆಳಗ್ಗೆ ಹಲವು ತಂಡಗಳಾಗಿ ಜಮ್ಮು ಕಾಶ್ಮೀರದ ವಿವಿಧ ಪ್ರದೇಶಗಳ ಮೇಲೆ ದಾಳಿ ನಡೆಸಿದೆ.
ಶೋಪಿಯಾನ್, ಅನಂತ್ನಾಗ್ ಸೇರಿದಂತೆ ಕಾಶ್ಮೀರದ ವಿವಿಧ ಜಿಲ್ಲೆಗಳ 12 ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸುತ್ತಿವೆ. ಖಚಿತ ಪುರಾವೆಗಳನ್ವ ಈ ದಾಳಿಯನ್ನು ನಡೆಸಿರುವುದಾಗಿ ಎನ್ಐಎ ತಿಳಿಸಿದೆ.
ಈಗಾಗಲೇ ಕಾಶ್ಮೀರದ ಭಯೋತ್ಪಾದಕರಿಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿದ ಆರೋಪದಡಿ ಬಿಹಾರದ ಇಬ್ಬರು ಆರೋಪಿಗಳನ್ನು ಈಗಾಗಲೇ ಎನ್ಐಎ ವಶಕ್ಕೆ ಪಡೆದಿದೆ. ಹಾಗೆಯೇ ಈ ಹಿಂದೆಯೇ ಬಂಧಿಸಲಾದ ಭಯೋತ್ಪಾದಕನೋರ್ವನ ಮನೆಯ ಮೇಲೆಯೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜೊತೆಗೆ ಕಳೆದ ವಾರವಷ್ಟೇ ಎಲ್ಇಟಿ ಭಯೋತ್ಪಾದಕ ಸಂಘಟನೆಯ ಇಬ್ಬರು ಉಗ್ರರನ್ನು ಸಹ ಬಂಧನಕ್ಕೊಳಪಡಿಸಲಾಗಿದೆ ಎಂದು ಎನ್ಐಎ ಮೂಲಗಳು ಹೇಳಿವೆ.
ಜುಲೈ 11 ರಂದು ಜಮ್ಮು ಕಾಶ್ಮೀರದ ಅನಂತ್ನಾಗ್ನಲ್ಲಿ ಇಬ್ಬರು ಉಗ್ರರನ್ನು ತಟಸ್ಥರನ್ನಾಗಿಸಿದ ಬಳಿಕ ಎನ್ಐಎ ಭಯೋತ್ಪಾದನೆಗೆ ನೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಕಡೆಗಳಲ್ಲಿ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 5 ಜನರನ್ನು ಬಂಧಿಸಲಾಗಿತ್ತು. ಹಾಗೆಯೇ ಮೋಸ್ಟ್ ವಾಂಟೆಡ್ ಉಗ್ರ ಸೈಯದ್ ಸಲಾವುದ್ದೀನ್ನ ಇಬ್ಬರು ಪುತ್ರರನ್ನು ಮತ್ತು 11 ಮಂದಿ ಸರ್ಕಾರಿ ಉದ್ಯೋಗಿಗಳನ್ನು ಸಹ ಭಯೋತ್ಪಾದನೆಗೆ ನೆರವು ಪ್ರಕರಣದ ಆರೋಪದಲ್ಲಿ ವಜಾಗೊಳಿಸಲಾಗಿತ್ತು.
ಹೀಗೆ ಹಲವು ಭಯೋತ್ಪಾದಕರ ಬಂಧನದ ಬೆನ್ನಲ್ಲೇ ಎನ್ಐಎ ಸಹ ಭಯೋತ್ಪಾದನೆಗೆ ನೆರವು ನೀಡುತ್ತಿರುವವರ ವಿರುದ್ಧ ಕಾರ್ಯಾಚರಣೆ, ದಾಳಿ ನಡೆಸುತ್ತಿದೆ. ಅದಕ್ಕೆ ಪೂರಕವಾಗಿ ಇಂದು ಸಹ ಎನ್ಐಎ ಖಚಿತ ದಾಖಲೆಗಳ ಆಧಾರದ ಮೇಲೆ ಜಮ್ಮು ಕಾಶ್ಮೀರದ ವಿವಿಧೆಡೆ ದಾಳಿ ನಡೆಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.