ವಿಶ್ವಸಂಸ್ಥೆ: ಆಗಸ್ಟ್ 1 ರಿಂದ ಒಂದು ತಿಂಗಳ ಅವಧಿಗೆ ಭಾರತವು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷತೆ ವಹಿಸಲಿದೆ.
ಈ ಸಂಬಂಧ ವಿಶ್ವಸಂಸ್ಥೆಯಲ್ಲಿನ ಭಾರತ ರಾಯಭಾರಿ ಟಿ ಎಸ್ ತಿರುಮೂರ್ತಿ ಅವರು ಮಾತನಾಡಿದ್ದು, ಭಾರತದ 75 ನೇ ಸ್ವಾತಂತ್ರ್ಯದ ಸಂದರ್ಭದಲ್ಲಿಯೇ ಭದ್ರತಾ ಮಂಡಳಿಯ ಅಧ್ಯಕ್ಷತೆ ವಹಿಸುವ ಅವಕಾಶ ದೊರೆತಿರುವುದು ಗೌರವದ ವಿಚಾರ ಎಂದು ಹೇಳಿದ್ದಾರೆ.
ಈ ಒಂದು ತಿಂಗಳ ಅವಧಿಯಲ್ಲಿ ಕಡಲ ಭದ್ರತೆ, ಶಾಂತಿ ಪಾಲನೆ, ಭಯೋತ್ಪಾದನೆ ನಿಗ್ರಹಗಳೆಂಬ ಮೂರು ಮಹತ್ವದ ವಿಚಾರಗಳ ಬಗ್ಗೆ ಕಾರ್ಯಕ್ರಮ ನಡೆಸಲು ಭಾರತ ಅಗತ್ಯ ಸಿದ್ಧತೆಗಳನ್ನು ನಡೆಸಿದೆ. ಆಗಸ್ಟ್ 2 ರಂದು ಈ ಒಂದು ತಿಂಗಳ ಅವಧಿಯಲ್ಲಿ ನಡೆಯಲಿರುವ ಕಾರ್ಯಕ್ರಮಗಳ ಬಗ್ಗೆ ತಿರುಮೂರ್ತಿ ಮಾಹಿತಿ ನೀಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.