ಬೆಂಗಳೂರು: ಭಾರತೀಯ ಜನತಾ ಯುವ ಮೋರ್ಚಾ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ Cheer for India, be like an Olympian – cycling ride ಧ್ಯೇಯದಡಿ ನಡೆದ ಸೈಕಲ್ ರೈಡ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.
ದೇಶವನ್ನು ಪ್ರತಿನಿಧಿಸಿ ಒಲಿಂಪಿಕ್ಸ್ನಲ್ಲಿ ಭಾಗವಹಿಸುತ್ತಿರುವ ಸ್ಪರ್ಧಿಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಸೈಕಲ್ ರೈಡ್ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಬೊಮ್ಮಾಯಿ, ಪ್ರತಿಯೊಂದು ವಿಚಾರಕ್ಕೂ ಸೂಕ್ಷ್ಮವಾಗಿ ಸ್ಪಂದನೆ ನೀಡುವ ಪ್ರಧಾನಿ ಮೋದಿ ಅವರು ಭಾರತ ಮತ್ತು ಭಾರತೀಯತೆಗಾಗಿ ಸದಾ ತುಡಿಯುತ್ತಾರೆ. ಯುವಜನತೆಗೆ ಸದಾ ಸ್ಪೂರ್ತಿ ನೀಡುತ್ತಾರೆ. ಸ್ವಚ್ಛ ಭಾರತದಿಂದ ಹಿಡಿದು, ಪ್ರತಿಯೊಂದು ಕಾರ್ಯಕ್ರಮದಲ್ಲಿಯೂ ಮೋದಿ ಅವರ ಸೂಕ್ಷ್ಮ ಸಂವೇದನೆ ಗೋಚರಿಸುತ್ತದೆ. ಅವರು ಖೇಲೋ ಇಂಡಿಯಾದ ಮೂಲಕ ಕ್ರೀಡಾ ಚಟುವಟಿಕೆಗಳಿಗೆ ಆದ್ಯತೆ ನೀಡಿದರೆ, ಜೀತೋ ಇಂಡಿಯಾ ಮೂಲಕ ಕ್ರೀಡಾಪಟುಗಳನ್ನು ಹುರಿದುಂಬಿಸುತ್ತಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇಂದು ಮುಖ್ಯಮಂತ್ರಿ @BSBommai ರವರು ಭಾರತೀಯ ಜನತಾ ಯುವ ಮೋರ್ಚಾ ವತಿಯಿಂದ ವಿಧಾನಸೌಧದ ಮುಂಭಾಗದ ಡಾ|| ಬಿ.ಆರ್.ಅಂಬೇಡ್ಕರ್ ವೀಧಿಯಲ್ಲಿ "Cheer 4 India, be like an Olympian – Cycling ride" ಘೋಷವಾಕ್ಯದಡಿ ಆಯೋಜಿಸಿದ್ದ “ಸೈಕಲ್ ರೈಡ್' ಗೆ ಚಾಲನೆ ನೀಡಿದರು. (1/2) pic.twitter.com/2FBz3qUgRr
— CM of Karnataka (@CMofKarnataka) August 1, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.