ಲಕ್ನೋ: ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ಮಥುರಾದ ವೃಂದಾವನದ ಸಮೀಪದ ಸುಖ್ರನ್ ಹಳ್ಳಿಯ 134 ಎಕರೆಗಳಷ್ಟು ಪ್ರದೇಶದಲ್ಲಿ ಅರಣ್ಯ ನಿರ್ಮಾಣ ಕಾರ್ಯವನ್ನು ಆರಂಭಿಸಲಿದೆ.
ಉತ್ತರ ಪ್ರದೇಶದ ಬ್ರಾಜ್ ತೀರ್ಥ ವಿಕಾಸ್ ಪರಿಷತ್, ಅರಣ್ಯ ಇಲಾಖೆ, ಜಿಲ್ಲಾಡಳಿತ ಮತ್ತು ಮಥುರಾ ವೃಂದಾವನ ಅಭಿವೃದ್ಧಿ ಪ್ರಾಧಿಕಾರಗಳ ಸಹಯೋಗದಲ್ಲಿ ಈ ಯೋಜನೆ ಸೆಪ್ಟೆಂಬರ್ ತಿಂಗಳಲ್ಲಿ ಆರಂಭವಾಗಲಿದೆ. 2.5 ಕೋಟಿ ರೂ. ವೆಚ್ಚದಲ್ಲಿ 77 ಸಾವಿರ ಸಸಿಗಳನ್ನು ಈ ಯೋಜನೆಯಡಿ ನೆಡಲು ಸರ್ಕಾರ ಯೋಜನೆ ರೂಪಿಸಿದೆ.
ಇದಕ್ಕಾಗಿ ನಿಗದಿ ಮಾಡಲಾದ ಪ್ರದೇಶವನ್ನು ತಟ್ಟುಗೊಳಿಸುವ ಕಾರ್ಯ ನಡೆಸಿದ ಬಳಿಕ ಸುತ್ತಲೂ ತಂತಿ ಬೇಲಿ ಅಳವಡಿಕೆ ಮಾಡಲಾಗುತ್ತದೆ. ಆ ಅರಣ್ಯ ಪ್ರದೇಶದಲ್ಲಿ ಕೊಳ ಮತ್ತು ಉದ್ಯಾನಗಳನ್ನು ಸಹ ನಿರ್ಮಾಣ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಈ ಅರಣ್ಯ ನಿರ್ಮಾಣ ಆಮ್ಲಜನಕ ಉತ್ಪಾದನೆಗೆ ಪೂರಕವಾಗಿರಲಿದ್ದು, ಮಣ್ಣಿನ ಫಲವತ್ತತೆ ಹೆಚ್ಚಿಸಲು ಪೂರಕವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದು ಪ್ರಾಣಿಗಳಿಗೆ, ವಿಶೇಷವಾಗಿ ಮಂಗಗಳಿಗೆ ಆವಾಸಸ್ಥಾನವಾಗಲಿದೆ. ದೇಶ ವಿದೇಶಗಳ ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಇದು ಮಹತ್ವ ಪಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.