ಮಂಗಳೂರು: ಟೊಕಿಯೋ ಒಲಿಂಪಿಕ್ಸ್ನಲ್ಲಿ ಭಾರತೀಯ ಬ್ಯಾಡ್ಮಿಂಟನ್ ತಾರೆ ಪಿ. ವಿ. ಸಿಂಧು ಅವರು ಕಂಚಿನ ಪದಕ ಗೆಲ್ಲುವ ಮೂಲಕ ಭಾರತದ ಕೀರ್ತಿ ಪತಾಕೆ ಹಾರಿಸಿದ್ದಾರೆ.
ಈ ಹಿಂದೆ ಭಾರತೀಯ ಕ್ರೀಡಾಪಟುಗಳು ಟೊಕಿಯೋಗೆ ತೆರಳುವ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿದ್ದರು. ಈ ಸಂದರ್ಭದಲ್ಲಿ ಪಿ. ವಿ. ಸಿಂಧು ಅವರು ಒಲಿಂಪಿಕ್ಸ್ ಹಿನ್ನೆಲೆಯಲ್ಲಿ ತಾವು ಡಯಟ್ನಲ್ಲಿದ್ದು, ನೆಚ್ಚಿನ ಐಸ್ಕ್ರೀಂ ತಿನ್ನುತ್ತಿಲ್ಲ ಎಂದು ತಿಳಿಸಿದ್ದರು.
ಈ ಸಂದರ್ಭದಲ್ಲಿ ಮೋದಿ ಅವರು ಪದಕ ಗೆದ್ದು ಬನ್ನಿ, ನಾವು ಜೊತೆಯಾಗಿ ಐಸ್ಕ್ರೀಂ ಸವಿಯೋಣ. ನಾನೇ ಕೊಡಿಸುತ್ತೇನೆ ಎಂದು ಹೇಳಿದ್ದರು. ಇದೀಗ ಸಿಂಧು ಪದಕ ಗೆದ್ದಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರಿನ ಪಬ್ಬಾಸ್ ಐಸ್ಕ್ರೀಂ ಟ್ವೀಟ್ ಮಾಡಿದೆ.
ಆತ್ಮೀಯ ಪ್ರಧಾನಿ ಮೋದಿ ಅವರೇ, ನೀವು ಪಿ. ವಿ. ಸಿಂಧು ಅವರಿಗೆ ಭರವಸೆ ನೀಡಿದ್ದೀರಿ. ಅವರು ಭಾರತಕ್ಕೆ ಪದಕ ತಂದುಕೊಟ್ಟಿದ್ದಾರೆ. ಭಾರತದ ಅತ್ಯುತ್ತಮ ಬ್ಯಾಡ್ಮಿಂಟನ್ ಆಟಗಾರ್ತಿಯ ಜೊತೆಗೆ ನಿಮಗೂ ಐಸ್ಕ್ರೀಂ ಟ್ರೀಟ್ ನೀಡಿ ಸಂಭ್ರಮಿಸಲು ನಾವು ಉತ್ಸುಕರಾಗಿದ್ದೇವೆ ಎಂದು ಪಬ್ಬಾಸ್ ತನ್ನ ಟ್ವೀಟ್ನಲ್ಲಿ ತಿಳಿಸಿದೆ.
Dear @narendramodi, you made a promise to @Pvsindhu1. Now that the 🥉medal has come home 🥳 let us treat you with the best ice cream🍨 in India to celebrate with the best badminton player in India.#Tokyo2020 #PVSindhu #MakeInIndia #OlympicsBadminton
— PabbasIdealCafeMangalore (@PabbasIdealCafe) August 2, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.