ದಂಥೇವಾಡ: ಛತ್ತೀಸ್ಘಡದ ಮಲಂಗಿರಿ ಪ್ರದೇಶದಲ್ಲಿ ಗುಪ್ತ ಕಾರ್ಯಾಚರಣೆ ನಡೆಸುತ್ತಿದ್ದ ಮಹಿಳಾ ನಕ್ಸಲ್ ರಂಬತಿ ಬಾರ್ಸೇ ಸೇರಿದಂತೆ ಒಟ್ಟು 11 ಮಾವೋವಾದಿಗಳು ಪೊಲೀಸರಿಗೆ ಶರಣಾಗಿದ್ದಾರೆ.
ಶರಣಾಗತರಾದ ಮಾವೋವಾದಿಗಳ ತಲೆಗೆ ಒಂದು ಲಕ್ಷ ರೂ. ಬಹುಮಾನ ಘೋಷಣೆಯಾಗಿತ್ತು. ಬಂಧಿತರು 2013 ರ ಚುನಾವಣಾ ಸಂದರ್ಭದಲ್ಲಿ ಎಲೆಕ್ಟ್ರಾನಿಕ್ ಮತಯಂತ್ರ ದೋಚುವುದು, ಪೊಲೀಸರ ಮೇಲೆ ಗುಂಡು ಹಾರಿಸುವುದು, ವಾಹನಗಳಿಗೆ ಬೆಂಕಿ ಹಚ್ಚುವುದು ಸೇರಿದಂತೆ ಇನ್ನಿತರ ಅಪರಾಧಿ ಕೃತ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು ಎಂದು ಮೂಲಗಳು ಹೇಳಿವೆ.
ಕಳೆದ ವಾರವಷ್ಟೇ ನಾಲ್ವರು ನಕ್ಸಲರು ದಂತೇವಾಡದಲ್ಲಿ ಪೊಲೀಸರಿಗೆ ಶರಣಾಗಿದ್ದರು. ಇವರಲ್ಲಿ ಓರ್ವ ಮಹಿಳೆಯೂ ಸೇರಿದ್ದು, 2015 ರಲ್ಲಿ ಚೋಲ್ನಾರ್ ಸೇತುವೆಯನ್ನು ನೆಲಸಮಗೊಳಿಸುವಲ್ಲಿ ಇವರು ಕೃತ್ಯ ಎಸಗಿದ್ದರು ಎಂದು ಮೂಲಗಳು ಹೇಳಿವೆ. ಹಾಗೆಯೇ ಭದ್ರತಾ ಪಡೆಗಳ ವಾಹನ ಹಾಳುಗೆಡವಿದ ಆರೋಪವೂ ಇವರ ಮೇಲಿದೆ. ಈ ಕಾರ್ಯಾಚರಣೆ ಸಂದರ್ಭದಲ್ಲಿ ಏಳು ಮಂದಿ ಯೋಧರು ಹುತಾತ್ಮರಾಗಿದ್ದರು ಎಂದು ಮೂಲಗಳು ಹೇಳಿವೆ.
ಸದ್ಯ ಪೊಲೀಸರಿಗೆ ಶರಣಾಗಿರುವ ಮಾವೋವಾದಿಗಳು ತಮ್ಮ ಕುಕೃತ್ಯಗಳಿಂದ ಬೇಸತ್ತು, ಬದಲಾಗಿ ಸಮಾಜದ ಮುಖ್ಯ ವಾಹಿನಿಗೆ ಬರುವುದಾಗಿ ತಿಳಿಸಿದ್ದಾರೆ ಎಂದು ಪೊಲೀಸ್ ಮೂಲಗಳು ಹೇಳಿವೆ. ಇತ್ತೀಚೆಗೆ ಗಣನೀಯ ಪ್ರಮಾಣದಲ್ಲಿ ಮಾವೋವಾದಿಗಳು ಪೊಲೀಸರ ಮುಂದೆ ಶರಣಾಗುತ್ತಿದ್ದಾರೆ ಎಂಬುದಾಗಿಯೂ ಮೂಲಗಳು ಹೇಳಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.