ನವದೆಹಲಿ: ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಮುದ್ರಾ ಯೋಜನೆಯ ಅಡಿಯಲ್ಲಿ 15.52 ಲಕ್ಷ ಕೋಟಿ ರೂ. ಸಾಲ ಮಂಜೂರು ಮಾಡಿದೆ ಎಂದು ಕೇಂದ್ರ ಸರ್ಕಾರದ ಅಧಿಕೃತ ವರದಿಗಳು ತಿಳಿಸಿವೆ.
2015 ರ ಎಪ್ರಿಲ್ ತಿಂಗಳಲ್ಲಿ ಈ ಯೋಜನೆ ಆರಂಭವಾಗಿದ್ದು, ಈವರೆಗೆ ಸುಮಾರು 29.55 ಕೋಟಿ ರೂ. ಸಾಲ ಮಂಜೂರು ಮಾಡಿದೆ. ಈ ಯೋಜನೆಯು ಸೂಕ್ಷ್ಮ, ಸಣ್ಣ, ಮಧ್ಯಮ ಉದ್ಯಮಗಳಿಗೆ ಸಾಲಗಳನ್ನು ಒದಗಿಸಿದೆ. ಹಾಗೆಯೇ ನವೋದ್ಯಮಗಳಿಗೂ ಸಾಲ ಒದಗಿಸಿದೆ. ನವೋದ್ಯಮಗಳಿಗೆ ಸಂಬಂಧಿಸಿದಂತೆ 6.8 ಕೋಟಿಗೂ ಹೆಚ್ಚು ಸಾಲವನ್ನು ಒದಗಿಸಿರುವುದಾಗಿ ಸರ್ಕಾರ ಹೇಳಿದೆ. ಹಾಗೆಯೇ ಸೂಕ್ಷ್ಮ, ಸಣ್ಣ, ಮಧ್ಯಮ ಉದ್ಯಮಗಳಿಗೆ ಸಂಬಂಧಿಸಿದಂತೆ 10 ಲಕ್ಷಗಳ ವರೆಗೆ ಸಾಂಸ್ಥಿಕ ಸಾಲ ಒದಗಿಸಲಾಗುತ್ತಿದೆ.
ಈ ಯೋಜನೆಯು ಉತ್ಪಾದನೆ, ವ್ಯಾಪಾರ, ಕೃಷಿಗೆ ಸಂಬಂಧಿಸಿದ ವಲಯಗಳು ಸೇರಿದಂತೆ ಇನ್ನೂ ಹಲವಾರು ವಲಯಗಳಲ್ಲಿ ಆದಾಯ ಸೃಷ್ಟಿಗೆ ಸಹಕಾರಿಯಾಗಿದೆ. ಇದರ ಜೊತೆಗೆ ಸಾಲ ಸೌಲಭ್ಯಗಳನ್ನು ಒದಗಿಸುವ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ 3 ಲಕ್ಷ ಕೋಟಿ ರೂ. ಗಳನ್ನು ಮಂಜೂರು ಮಾಡುವ ನಿಟ್ಟಿನಲ್ಲಿಯೂ ಅಗತ್ಯ ಕ್ರಮ ಕೈಗೊಂಡಿದೆ.
ಹಾಗೆಯೇ ಕೇಂದ್ರ ಸರ್ಕಾರದ ಮತ್ತೊಂದು ಯೋಜನೆ ಎಸ್ಯುಪಿಐ ಯೋಜನೆಯು ದೇಶದ ಪರಿಶಿಷ್ಟ ಜಾತಿ/ಪಂಗಡಕ್ಕೆ 10 ಲಕ್ಷ ರೂ. ಗಳಿಂದ 1 ಕೋಟಿ ವರೆಗೆ ಸಾಲ ಸೌಲಭ್ಯ ಒದಗಿಸುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.