ಬೆಂಗಳೂರು: ಕಾವೇರಿ ಕಾಲಿಂಗ್ ಅಭಿಯಾನದ ಮೂಲಕ ಕರ್ನಾಟಕದ 9 ಜಿಲ್ಲೆಗಳಿಗೆ ಸಂಬಂಧಿಸಿದಂತೆ 35 ಮಿಲಿಯನ್ ಸಸಿಗಳನ್ನು ನೆಡುವ ಗುರಿಯನ್ನು ಹೊಂದಲಾಗಿದೆ ಎಂದು ಇಶಾ ಫೌಂಡೇಷನ್ ಸಂಸ್ಥಾಪಕರಾದ ಸದ್ಗುರು ಜಗ್ಗಿ ವಾಸುದೇವ್ ತಿಳಿಸಿದ್ದಾರೆ.
ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಈ ಅಭಿಯಾನದ ಮೂಲಕ ಕರ್ನಾಟಕ ಮತ್ತು ತಮಿಳುನಾಡು ಸೇರಿದಂತೆ 1.1 ಕೋಟಿಗಳಷ್ಟು ಸಸಿಗಳನ್ನು ನೆಡಲಾಗಿದ್ದು, ಆ ಮೂಲಕ ಅಭೂತಪೂರ್ವ ಯಶಸ್ಸು ಕಾಣಲಾಗಿದೆ ಎಂದು ಅವರು ತಿಳಿಸಿದ್ದಾರೆ. ಈ ಬಾರಿ 35 ಮಿಲಿಯನ್ ಸಸಿಗಳನ್ನು ನೆಡುವ ಗುರಿಯನ್ನು ಈ ಅಭಿಯಾನ ಹೊಂದಿದ್ದು, ಆ ಮೂಲಕ ರೈತರಿಗೆ ಪರಿಸರಕ್ಕೆ ಪೂರಕ ಮತ್ತು ಆರ್ಥಿಕವಾಗಿ ಲಾಭದಾಯಕ ಕೃಷಿ ಮಾದರಿಯನ್ನು ಜನಪ್ರಿಯಗೊಳಿಸುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ಸದ್ಗುರು ಹೇಳಿದ್ದಾರೆ.
ಈ ಕಾರ್ಯಕ್ರಮವನ್ನು ಕಾವೇರಿ ಜಲಾಯನಕ್ಕೆ ಪೂರಕವಾಗಿರುವ ಸುಮಾರು 24 ಲಕ್ಷ ರೈತರನ್ನೊಳಗೊಂಡಂತೆ ರಾಜ್ಯದ 9 ಜಿಲ್ಲೆಗಳ 57 ತಾಲೂಕುಗಳಿಗೆ ಸಂಬಂಧಿಸಿದಂತೆ ಇರುವ 1785 ಗ್ರಾಮ ಪಂಚಾಯತ್ಗಳಲ್ಲಿ ಸ್ವಯಂಸೇವಕರು ನಡೆಸಿಕೊಡಲಿದ್ದಾರೆ. ಈ ಯೋಜನೆ ಕಾರ್ಯಗತಗೊಳಿಸುವಲ್ಲಿ ಯಶಸ್ವಿಯಾದರೆ ಇದು ಇಡೀ ದೇಶದ ತಾಪಮಾನ ಬದಲಾವಣೆಗೆ ಒಂದು ನಿದರ್ಶನವಾಗುತ್ತದೆ. ಇಡೀ ಪ್ರಪಚವೇ ನೀರಿಗಾಗಿ ಮಳೆಯನ್ನು ಅವಲಂಬಿಸಿದೆ. ಈ ದೃಷ್ಟಿಯಿಂದ ಕಾವೇರಿ ಕಾಲಿಂಗ್ ಕಲ್ಪನೆಯು ಇಡೀ ಪ್ರಪಂಚಕ್ಕೆ ಮಾದರಿಯಾಗಲಿದೆ ಎಂದು ಸದ್ಗುರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮುಂದಿನ 8 ವಾರಗಳಿಗೆ ಸಂಬಂಧಿಸಿದಂತೆ 1800 ಟ್ರೀ ಬೇಸ್ಡ್ ಕೃಷಿ ಮಾದರಿಯನ್ನು ರೈತರಿಗೆ ತಿಳಿಯಪಡಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಜನಪ್ರಿಯ ವ್ಯಕುಗಳು, ಸ್ಥಳೀಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮ ಸರ್ಕಾರದ ಪ್ರತಿನಿಧಿಗಳು ಮತ್ತು ರೈತರ ನಡುವಿನ ಸಂಪರ್ಕ ಕೊಂಡಿಯಾಗಿ ಕಾರ್ಯ ನಿರ್ವಹಿಸುತ್ತದೆ ಎಂಬುದಾಗಿಯೂ ಸದ್ಗುರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.