ನವದೆಹಲಿ: ಹಿಟ್ ಆಂಡ್ ರನ್ ಪ್ರಕರಣದಲ್ಲಿ ಕೊನೆಯುಸಿರೆಳೆದ ವ್ಯಕ್ತಿಯ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ನೀಡಲು ಮತ್ತು ಗಂಭೀರ ಗಾಯಗೊಂಡವರಿಗೆ 50 ಸಾವಿರ ರೂ.ಗಳನ್ನು ಪರಿಹಾರವಾಗಿ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಈ ಸಂಬಂಧ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ತಿಳಿಸಿದ್ದು, ಪ್ರಸ್ತುತ ಹಿಟ್ ಆಂಡ್ ರನ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೃತಪಟ್ಟವರಿಗೆ 25 ಸಾವಿರ ರೂ., ಗಾಯಗೊಂಡವರಿಗೆ 12,500 ರೂ.ಗಳನ್ನು ನೀಡಲಾಗುತ್ತದೆ. ಇದನ್ನು ಮೃತಪಟ್ಟವರಿಗೆ 2 ಲಕ್ಷ ಮತ್ತು ಗಾಯಗೊಂಡವರಿಗೆ 50 ಸಾವಿರ ರೂ. ಗಳಿಗೆ ಏರಿಕೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
2019 ರ ವರದಿಗಳಂತೆ ದೇಶದಲ್ಲಿ ಹಿಟ್ ಆಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ 29,354 ಮಂದಿ ಸಾವಿಗೀಡಾಗಿದ್ದಾರೆ. 67,751 ಜನರಿಗೆ ಗಾಯಗಳಾಗಿರುವ ಬಗ್ಗೆ ಮಾಹಿತಿ ಇದೆ. ಅಪಘಾತ ಎಸಗಿ ಪರಾರಿಯಾದವರನ್ನು ಹಿಡಿಯಲು ಕೆಲವೊಮ್ಮೆ ಸಾಧ್ಯವಾಗುವುದಿಲ್ಲ. ಆದ್ದರಿಂದ ಸರ್ಕಾರದ ವತಿಯಿಂದ ಮೋಟಾರ್ ವಾಹನ ಅಪಘಾತ ನಿಧಿ ಸ್ಥಾಪಿಸಿ ಆ ಮೂಲಕ ಪರಿಹಾರ ಒದಗಿಸುವುದಾಗಿ ಗಡ್ಕರಿ ಹೇಳಿದ್ದಾರೆ.
ಹಾಗೆಯೇ ಮುಂದಿನ ಒಂದು ವರ್ಷಗಳೊಳಗೆ ವಾಹನ ತಯಾರಕರು ಫ್ಲೆಕ್ಸಿ ಫ್ಯೂಯೆಲ್ ವಾಹನಗಳ ಉತ್ಪಾದನೆಗೆ ಹೆಚ್ಚು ಒತ್ತು ನೀಡಲು ಗಡ್ಕರಿ ಕರೆ ಕೊಟ್ಟಿದ್ದಾರೆ. ಜೊತೆಗೆ ಎಲ್ಲಾ ವಾಹನಗಳಲ್ಲಿಯೂ ಕನಿಷ್ಠ 6 ಏರ್ಬ್ಯಾಗ್ ಇರುವಂತೆ ಗಮನ ಹರಿಸಲು ಅವರು ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.