ಲಕ್ನೋ: ಉತ್ತರ ಪ್ರದೇಶದ ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ದೇಶದ ಬಹುಕೋಟಿ ಜನರ ಕನಸಾದ ಶ್ರೀರಾಮ ಮಂದಿರ 2023 ರ ಡಿಸೆಂಬರ್ ತಿಂಗಳೊಳಗೆ ಭಕ್ತಾಧಿಗಳ ಪ್ರವೇಶಕ್ಕೆ ಮುಕ್ತವಾಗಲಿದೆ ಎಂದು ಮೂಲಗಳು ತಿಳಿಸಿವೆ.
2025 ರ ವೇಳೆಗೆ ಸುಮಾರು 70 ಎಕರೆ ಪ್ರದೇಶದಲ್ಲಿ ನಡೆಯುತ್ತಿರುವ ಮಂದಿರ ನಿರ್ಮಾಣ ಕಾಮಗಾರಿಗಳು ಸಂಪೂರ್ಣಗೊಳ್ಳಲಿವೆ. ಶ್ರೀ ರಾಮ ಮಂದಿರ ನಿರ್ಮಾಣ ಕಾಮಗಾರಿಗೆ 2020 ರ ಆಗಸ್ಟ್ 15 ರಂದು ಪ್ರಧಾನಿ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದ್ದರು.
ಪ್ರಸ್ತುತ ಈ ದೇವಾಲಯ ನಿರ್ಮಾಣದ ಅಡಿಪಾಯದ ಕಾಮಗಾರಿಗಳನ್ನು ಎಂಜಿನಿಯರ್ಗಳು ನಡೆಸುತ್ತಿದ್ದಾರೆ. ಈ ಕೆಲಸಗಳು ಸೆಪ್ಟೆಂಬರ್ 15 ರೊಳಗಾಗಿ ಪೂರ್ಣಗೊಳ್ಳಲಿವೆ. ಬಳಿಕ ನವೆಂಬರ್ ತಿಂಗಳಲ್ಲಿ ಎರಡನೇ ಹಂತದ ಕಾಮಗಾರಿ ಆರಂಭಿಸುವ ಸಾಧ್ಯತೆ ಇದೆ. ಆ ಬಳಿಕ ಎರಡು ವರ್ಷಗಳಲ್ಲಿ ದೇಗುಲದ ಇನ್ನಿತರ ಪ್ರಮುಖ ಕಾರ್ಯಗಳು ಸಂಪೂರ್ಣವಾಗಲಿವೆ. ಆ ಬಳಿಕ ಸಾರ್ವಜನಿಕರಿಗೆ ಅವಕಾಶ ಕಲ್ಪಿಸುವ ನಿರೀಕ್ಷೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.