ಬೆಂಗಳೂರು: ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಯಾವುದೇ ರಾಜಿ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟವಾಗಿ ತಿಳಿಸಿದ್ದಾರೆ.
ಮೇಕೆದಾಟು ವಿಚಾರವನ್ನು ತಮಿಳುನಾಡು ರಾಜಕೀಯದ ದಾಳವಾಗಿ ಬಳಕೆ ಮಾಡುತ್ತಿದೆ. ಅಲ್ಲಿ ಯಾವುದೇ ಪಕ್ಷವಿರಬಹುದು, ಆದರೆ ಅವರು ಈ ಯೋಜನೆಯನ್ನು ರಾಜಕಾರಣಕ್ಕಾಗಿ ವಿರೋಧಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಕುಡಿಯುವ ನೀರು, ವಿದ್ಯುತ್ ಮೊದಲಾದವುಗಳನ್ನು ಕಷ್ಟಕಾಲದಲ್ಲಿ ಹಂಚಿಕೆ ಮಾಡಬಹುದು. ಇದು ಎಲ್ಲರಿಗೂ ತಿಳಿದಿರುವ ವಿಚಾರ ಎಂದು ಅವರು ಹೇಳಿದ್ದಾರೆ.
ಈ ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಕೇಂದ್ರ ಸರ್ಕಾರದ ಜೊತೆಗೂ ಮಾತುಕತೆ ನಡೆಸಲಾಗಿದೆ. ರಾಜ್ಯದ ಸಂಸದರ ನಿಯೋಗದ ಜೊತೆಗೂ ಈ ಸಂಬಂಧ ಮಾತುಕತೆ ನಡೆಸುವಂತೆ ಒತ್ತಾಯಿಸಿದ್ದೇನೆ ಎಂದು ಬೊಮ್ಮಾಯಿ ಹೇಳಿದ್ದಾರೆ. ಶೀಘ್ರದಲ್ಲೇ ಈ ವಿಸ್ತೃತ ಯೋಜನೆಗೆ ಕೇಂದ್ರ ಅನುಮೋದನೆ ನೀಡುವ ಸಾಧ್ಯತೆ ಇದೆ. ಆ ಕೂಡಲೇ ಕಾಮಗಾರಿ ಆರಂಭ ಮಾಡಲಾಗುವುದು. ಅದರಲ್ಲಿ ರಾಜಿ ಇಲ್ಲ ಎಂದು ಅವರು ಸ್ಪಷ್ಟವಾಗಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.