ನವದೆಹಲಿ: ಆಗಸ್ಟ್ 5 ಭಾರತದ ಇತಿಹಾಸದಲ್ಲಿ ನೆನಪಿನಲ್ಲಿ ಉಳಿಯುವ ದಿನವಾಗಿದೆ ಎಂದು ಪ್ರಧಾನಿ ಮೋದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅವರು ಉತ್ತರ ಪ್ರದೇಶದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯ ಫಲಾನುಭವಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು.
ಈ ದಿನ ದೇಶದಲ್ಲಿ ಮೂರು ಮಹತ್ವದ ಘಟನೆಗಳಿಗೆ ಸಾಕ್ಷಿಯಾಗಿದೆ. ಜಮ್ಮು ಕಾಶ್ಮೀರದ 370 ನೇ ವಿಧಿ ರದ್ಧತಿಗೆ ಏರಡು ವರ್ಷ, ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣದ ಭೂಮಿಪೂಜೆಗೆ ಒಂದು ವರ್ಷ, ಜೊತೆಗೆ ಇಂದು ಟೊಕಿಯೋ ಒಲಿಂಪಿಕ್ಸ್ನಲ್ಲಿ ಪುರುಷರ ಹಾಕಿ ತಂಡ ಕಂಚು ಗೆದ್ದ ಮಹತ್ವದ ದಿನವಾಗಿ ಆಗಸ್ಟ್ 5 ಐತಿಹಾಸಿಕವಾಗಿ ಉಳಿಯಲ್ಪಡುತ್ತದೆ ಎಂದು ಅವರು ಹೇಳಿದ್ದಾರೆ.
2019 ರ ಆಗಸ್ಟ್ 5 ರಂದು ಜಮ್ಮು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದು ಮಾಡಲಾಯಿತು. ಆ ಬಳಿಕ ಕಣಿವೆ ರಾಜ್ಯದಲ್ಲಿ ಶಾಂತಿ, ಅಭೂತಪೂರ್ವ ಪ್ರಗತಿ ಸಾಧ್ಯವಾಗಿದೆ ಎಂದು ತಿಳಿಸಿದರು. ಕಳೆದ ವರ್ಷ ಇದೇ ದಿನದಂದು ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಮೊದಲ ಹೆಜ್ಜೆ ಇರಿಸಲಾಯಿತು. ಇಂದು ಆ ಭವ್ಯ ರಾಮಮಂದಿರದ ಕೆಲಸಗಳು ಯಶಸ್ವಿಯಾಗಿ ನಡೆಯುತ್ತಿವೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಹಾಗೆಯೇ 41 ವರ್ಷಗಳ ಬಳಿಕ ಒಲಿಂಪಿಕ್ಸ್ ಕ್ರೀಡಾಕೂಟದ ಹಾಕಿ ಪಂದ್ಯದಲ್ಲಿ ಭಾರತಕ್ಕೆ ಪದಕ ಲಭಿಸಿದೆ. ಭಾರತೀಯ ಪುರುಷರ ಹಾಕಿ ತಂಡ ಆ ಮೂಲಕ ಸಾಧನೆ ಮೆರೆದಿದೆ. ಇದೊಂದು ಐತಿಹಾಸಿಕ ಘಟನೆ ಎಂದು ಮೊದಿ ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಸಂಸತ್ ಅಧಿವೇಶನದಲ್ಲಿ ಕೋಲಾಹಲ ಎಬ್ಬಿಸಿ, ಆರೋಗ್ಯಪೂರ್ಣ ಚರ್ಚೆ ನಡೆಯದಂತೆ ತಡೆಗಳನ್ನು ಸೃಷ್ಟಿಸುವ ವಿರೋಧ ಪಕ್ಷಗಳ ವಿರುದ್ಧ ಮೋದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದೇ ಸಂದರ್ಭದಲ್ಲಿ ಆಗಸ್ಟ್ 5, 2020 ರ ರಾಮ ಮಂದಿರ ನಿರ್ಮಾಣ ಶಿಲಾನ್ಯಾಸದ ಸವಿ ನೆನಪಿಗಾಗಿ ಅಂಚೆ ಚೀಟಿ ಬಿಡುಗಡೆ ಮಾಡಿದರು. ಹಾಗೆಯೇ ಶಂಕುಸ್ಥಾಪನೆ ನೆರವೇರಿಸುವ ಫಲಕವನ್ನು ಅವರು ಅನಾವರಣಗೊಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.