ನವದೆಹಲಿ : ಕಳೆದ ಮೂರು ವರ್ಷಗಳಲ್ಲಿ 189 ಕ್ರೀಡಾ ಮೂಲ ಸೌಕರ್ಯ ಯೋಜನೆಗಳು, 360 ಖೇಲೋ ಇಂಡಿಯಾ ಕೇಂದ್ರಗಳು, 24 ಖೇಲೋ ಇಂಡಿಯಾ ರಾಜ್ಯಮಟ್ಟದ ಉತ್ಕೃಷ್ಟತಾ ಕೇಂದ್ರಗಳು ಮತ್ತು 160 ಖೇಲೋ ಇಂಡಿಯಾ ಅಕಾಡೆಮಿಗಳನ್ನು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದಿಂದ ದೇಶಾದ್ಯಂತ ಸ್ಥಾಪನೆ ಮಾಡಲಾಗಿದೆ ಎಂದು ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಶ್ರೀ ಅನುರಾಗ್ ಠಾಕೂರ್ ಹೇಳಿದ್ದಾರೆ.
ಕ್ರೀಡೆ ರಾಜ್ಯದ ವಿಷಯವಾಗಿದ್ದು, ಕ್ರೀಡಾ ಅಭಿವೃದ್ಧಿ, ಕ್ರೀಡೆಗಳ ಉತ್ತೇಜನಕ್ಕೆ ನೀತಿ ರೂಪಿಸುವುದು ಮತ್ತು ಗ್ರಾಮೀಣ ಭಾಗದಲ್ಲಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವುದು ರಾಜ್ಯಗಳು/ ಕೇಂದ್ರಾಡಳಿತ ಸರ್ಕಾರಗಳ ಜವಾಬ್ದಾರಿಯಾಗಿದೆ. ಈ ಪ್ರಯತ್ನಗಳಿಗೆ ಕೇಂದ್ರ ಸರ್ಕಾರ ಪೂರಕವಾಗಿ ಕಾರ್ಯನಿರ್ವಹಿಸಲಿದೆ.
ಕ್ರೀಡೆಯನ್ನು ಉತ್ತೇಜಿಸಲು ಯುವಜನ ಸೇವೆ ಮತ್ತು ಕ್ರಿಡಾ ಸಚಿವಾಲಯ ಬಹು ಹಂತದ ಕಾರ್ಯಕ್ರಮಗಳನ್ನು ರೂಪಿಸಿದೆ ಮತ್ತು ಗ್ರಾಮೀಣ ಪ್ರದೇಶ ಒಳಗೊಂಡಂತೆ ದೇಶದಲ್ಲಿ ಕ್ರೀಡಾಪಟುಗಳನ್ನು ಉತ್ತೇಜಿಸುತ್ತಿದೆ. ಮುಖ್ಯ ಕಾರ್ಯಕ್ರಮಗಳಾಗಿ ಖೇಲೋ ಇಂಡಿಯಾ ಕಾರ್ಯಕ್ರಮ, ರಾಷ್ಟ್ರೀಯ ಕ್ರೀಡಾ ಒಕ್ಕೂಟಕ್ಕೆ ನೆರವು, ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಗೆದ್ದ ತಂಡ ಮತ್ತು ತರಬೇತುದಾರರಿಗೆ ವಿಶೇಷ ಪ್ರಶಸ್ತಿಗಳು, ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳು, ಪ್ರತಿಷ್ಟಿತ ಕ್ರೀಡಾಪಟುಗಳಿಗೆ ಪಿಂಚಣಿ, ಪಂಡಿತ್ ದೀನ್ ದಯಾಳ್ ರಾಷ್ಟ್ರೀಯ ಕ್ರೀಡಾ ಕಲ್ಯಾಣ ನಿಧಿ, ರಾಷ್ಟ್ರೀಯ ಕ್ರೀಡಾ ಅಭಿವೃದ್ಧಿ ನಿಧಿ, ಭಾರತೀಯ ಕ್ರೀಡಾ ಪ್ರಾಧಿಕಾರದಿಂದ ಕ್ರೀಡಾ ತರಬೇತಿ ಕೇಂದ್ರಗಳನ್ನು ಆರಂಭಿಸುವುದು.
ಈ ಕಾರ್ಯಕ್ರಮಗಳ ಮಾಹಿತಿಗಳು ಸಾರ್ವಜನಿಕವಾಗಿ ಸಚಿವಾಲಯ ಮತ್ತು ಭಾರತೀಯ ಕ್ರೀಡಾ ಪ್ರಾಧಿಕಾರದ ವೆಬ್ಸೈಟ್ಗಳಲ್ಲಿ ಲಭ್ಯವಿದೆ. ಕ್ರೀಡಾ ಚಟುವಟಿಕೆಗೆ ಸಂಬಂಧಿಸಿದಂತೆ ವಿವಿಧ ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳಿಂದ ಕೇಂದ್ರ ಸರ್ಕಾರ ಕಾಲ ಕಾಲಕ್ಕೆ ಪ್ರಸ್ತಾವನೆಗಳನ್ನು ಸ್ವೀಕರಿಸುತ್ತಿದೆ. ಕಾರ್ಯಕ್ರಮಗಳಲ್ಲಿ ಲಭ್ಯವಿರುವ ಹಣ, ತಾಂತ್ರಿಕ ಸಾಧ್ಯತೆಗಳನ್ನು ಒಳಗೊಂಡಂತೆ ಪ್ರಸ್ತಾವನೆಗಳ ಪರಿಪೂರ್ಣತೆಗೆ ಒಳಪಟ್ಟು ಆಯಾ ಯೋಜನೆಗಳ ನಿಯತಾಂಕಗಳ ಪ್ರಕಾರ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗುತ್ತಿದೆ ಎಂದು ಅವರು ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ಈ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.