ನವದೆಹಲಿ: ಬಳಕೆದಾರರ ಸುರಕ್ಷತೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳ ಜೊತೆಗೆ ಕೇಂದ್ರ ಸರ್ಕಾರ ನಿರಂತರ ಸಂಪರ್ಕ ಸಾಧಿಸುತ್ತಿದ್ದು, ದೇಶದಲ್ಲಿ ಯಾವುದೇ ಸಾಮಾಜಿಕ ಮಾಧ್ಯಮ ಫ್ಲ್ಯಾಟ್ಫಾರ್ಮ್ಗಳನ್ನು ನಿರ್ಬಂಧಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.
ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಾಶಗೊಳಿಸಲು ಯಾವುದೇ ಸಾಮಾಜಿಕ ಮಾಧ್ಯಮಗಳಿಂದ ಅಸಾಧ್ಯ. ಬಳಕೆದಾರರು ದೇಶದಲ್ಲಿ ಸಾಮಾಜಿಕ ಸ್ವಾಸ್ಥ್ಯ ಕೆಡಹುವ ನಿಟ್ಟಿನಲ್ಲಿ ಸಮಾಜಿಕ ಮಾಧ್ಯಮಗಳನ್ನು ದುರುಪಯೋಗ ಮಾಡಿಕೊಳ್ಳುತ್ತಾರೆ. ಈ ಸಂಬಂಧ ಸರ್ಕಾರ ಸಹ ಹಲವು ದೂರುಗಳನ್ನು ಸ್ವೀಕರಿಸಿದೆ. ಇದಕ್ಕೆ ಸರ್ಕಾರ ಸೂಕ್ತ ಪ್ರತಿಕ್ರಿಯೆ ನೀಡಿದೆ. ಆದರೆ ದೇಶದಲ್ಲಿ ಯಾವುದೇ ಸಾಮಾಜಿಕ ಮಾಧ್ಯಮಗಳಿಗೆ ನಿರ್ಬಂಧ ಹೇರಿಲ್ಲ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ.
ಆದರೆ ಮಾಹಿತಿ ತಂತ್ರಜ್ಞಾನ ಕಾಯ್ದೆ 2000 ದ ಸೆಕ್ಷನ್ 69ಎ ಅಡಿಯಲ್ಲಿ ದೇಶದ ರಕ್ಷಣೆ, ಭದ್ರತೆ, ಏಕತೆ, ಸಾರ್ವಭೌಮತ್ವ, ವಿದೇಶಗಳ ಜೊತೆಗೆ ಉತ್ತಮ ಸಂಬಂಧ, ಕಾನೂನು ಹಿತದೃಷ್ಟಿಯಿಂದ ದುರುದ್ದೇಶದ ಆನ್ಲೈನ್ ವಿಚಾರಗಳನ್ನು ಸರ್ಕಾರ ನಿರ್ಬಂಧಿಸಬಹುದಾಗಿದೆ. ಸರ್ಕಾರದ ನೀತಿಗಳು ನ್ಯಾಯಯುತವಾಗಿದ್ದು, ಮುಕ್ತ ಮತ್ತು ವಿಶ್ವಾಸಾರ್ಹ ಅಂತರ್ಜಾಲವನ್ನು ಖಾತ್ರಿಪಡಿಸುವ ಗುರಿಯನ್ನು ಹೊಂದಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.