ಇಸ್ಲಾಮಾಬಾದ್ : ಪಾಕಿಸ್ಥಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದ ಹಿಂದೂ ದೇವಾಲಯದ ಮೇಲಿನ ದಾಳಿಗೆ ಸಂಬಂಧಿಸಿದಂತೆ ಭಾರತ ಪ್ರತಿಭಟನೆ ವ್ಯಕ್ತಪಡಿಸಿದ ಬೆನ್ನಲ್ಲೇ, ಅಲ್ಲಿನ ಪ್ರಧಾನಿ ಇಮ್ರಾನ್ ಖಾನ್ ಈ ಘಟನೆಯನ್ನು ಖಂಡಿಸಿ, ಆರೋಪಿಗಳನ್ನು ಬಂಧಿಸುವುದಾಗಿ ತಿಳಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಪಾಕ್ನ ಬೋಂಗ್ ನಗರದ ಸಿದ್ದಿ ವಿನಾಯಕ ದೇಗುಲ ಮತ್ತು ಮೂರ್ತಿಯನ್ನು ಅಲ್ಲಿನ ಗುಂಪೊಂದು ನಾಶಗೊಳಿಸಿ, ಸುಟ್ಟು ಹಾಕುವ ಯತ್ನ ನಡೆಸಿತ್ತು. ಈ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಇದಕ್ಕೆ ಭಾರತದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಭಾರತದ ಪ್ರತಿಭಟನೆಯಿಂದ ಎಚ್ಚೆತ್ತ ಇಮ್ರಾನ್ ಖಾನ್ ದೇವಾಲಯವನ್ನು ಪುನರ್ನಿರ್ಮಾಣ ಮಾಡಿಕೊಡುವ ಭರವಸೆ ನೀಡಿದ್ದಾರೆ.
ಈ ಸಂಬಂಧ ಇಮ್ರಾನ್ ಖಾನ್ ಮಾತನಾಡಿದ್ದು, ಈ ಘಟನೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ಈ ಕೃತ್ಯ ಎಸಗಿದ ಎಲ್ಲಾ ಆರೋಪಿಗಳನ್ನು ಬಂಧಿಸಲು ಆದೇಶಿಸಿದ್ದೇನೆ. ಈ ಘಟನೆಯ ವಿರುದ್ಧ ನಿರ್ವಕ್ಷ್ಯ ತಾಳಿದ ಪೊಲೀಸರ ವಿರುದ್ಧ ಸಹ ಕ್ರಮ ಕೈಗೊಳ್ಳಲು ಪಂಜಾಬ್ಗೆ ಈಗಾಗಲೇ ಸೂಚಿಸಲಾಗಿದೆ. ಈ ದೇಗುಲವನ್ನು ಸರ್ಕಾರ ಮರು ನಿರ್ಮಾಣ ಮಾಡಿಕೊಡುವುದಾಗಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.