ನವದೆಹಲಿ: ಕ್ರೀಡೆಗಳಲ್ಲಿ ಸಾಧನೆ ಮೆರೆದವರಿಗೆ ನೀಡುವ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರನ್ನು ಮೇಜರ್ ಧ್ಯಾನ್ಚಂದ್ ಎಂಬುದಾಗಿ ಮರುನಾಮಕರಣ ಮಾಡುವ ಮೂಲಕ ಪ್ರಧಾನಿ ಮೋದಿ ಸರ್ಕಾರ ಮಹತ್ವದ ನಡೆಯೊಂದಕ್ಕೆ ಸಾಕ್ಷಿಯಾಗಿದೆ.
ಈ ಸಂಬಂಧ ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದು, ಭಾರತದೆಲ್ಲೆಡೆಯಿಂದ ಖೇಲ್ ರತ್ನ ಪ್ರಶಸ್ತಿಗೆ ಮೇಜರ್ ಧ್ಯಾನ್ ಚಂದ್ ಅವರ ಹೆಸರನ್ನಿಡುವಂತೆ ಹಲವಾರು ಮನವಿಗಳು ಬಂದಿದ್ದವು. ಅವರೆಲ್ಲರ ಚಿಂತನೆಗಳಿಗೆ ನಾನು ಧನ್ಯವಾದ ತಿಳಿಸುತ್ತೇನೆ.
ಈ ಬದಲಾವಣೆಗೆ ಮನವಿ ಮಾಡಿಕೊಂಡ ಎಲ್ಲರ ಭಾವನೆಗಳನ್ನು ಗೌರವಿಸುತ್ತ, ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಬದಲಾವಣೆ ಮಾಡಲಾಗಿದೆ ಎಂದು ಮೋದಿ ಹೇಳಿದ್ದಾರೆ.
ಆ ಮೂಲಕ ಶ್ರೇಷ್ಠ ಭಾರತೀಯ ಹಾಕಿ ಕ್ರೀಡಾಪಟು ಧ್ಯಾನ್ ಚಂದ್ ಅವರಿಗೆ ಗೌರವ ಸಲ್ಲಿಸುವ ಮೂಲಕ ಕೇಂದ್ರ ಸರ್ಕಾರ ಮತ್ತೊಂದು ಐತಿಹಾಸಿಕ ನಡೆ ಇರಿಸಿದೆ.
ಮೇಜರ್ ಧ್ಯಾನ್ಚಂದ್ ಅವರು ಭಾರತದ ಅಗ್ರಗಣ್ಯ ಕ್ರೀಡಾಪಟುಗಳಲ್ಲಿ ಒಬ್ಬರು. ಅವರು ದೇಶಕ್ಕೆ ಗೌರವ, ಹೆಮ್ಮೆ ತಂದುಕೊಟ್ಟಿದ್ದಾರೆ. ನಮ್ಮ ರಾಷ್ಟ್ರದ ಅತ್ಯುನ್ನತ ಕ್ರೀಡಾ ಗೌರವಕ್ಕೆ ಅವರ ಹೆಸರಿಡುವುದು ಸೂಕ್ತ ಎಂದು ಮೋದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
I have been getting many requests from citizens across India to name the Khel Ratna Award after Major Dhyan Chand. I thank them for their views.
Respecting their sentiment, the Khel Ratna Award will hereby be called the Major Dhyan Chand Khel Ratna Award!
Jai Hind! pic.twitter.com/zbStlMNHdq
— Narendra Modi (@narendramodi) August 6, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.