ಇಂಪಾಲ್: ಟೊಕಿಯೋ ಒಲಿಂಪಿಕ್ಸ್ 2020 ರಲ್ಲಿ ಕಂಚು ಗೆದ್ದ ಭಾರತೀಯ ಪುರುಷರ ಹಾಕಿ ತಂಡದ ಮಿಡ್ ಫೀಲ್ಡ್ ಆಟಗಾರ ನೀಲಕಂಠ ಶರ್ಮಾ ಅವರಿಗೆ ಮಣಿಪುರ ಸರ್ಕಾರ 75 ಲಕ್ಷ ನಗದು ಬಹುಮಾನ ಮತ್ತು ಸರ್ಕಾರಿ ಉದ್ಯೋಗ ನೀಡುವುದಾಗಿ ಘೋಷಿಸಿದೆ.
ಸಿಎಂ ಎನ್. ಬಿರೆನ್ ಸಿಂಗ್ ಅವರು ನೀಲಕಂಠ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ ಸರ್ಕಾರಿ ಉದ್ಯೋಗ ನೀಡುವುದಾಗಿಯೂ ತಿಳಿಸಿದ್ದಾರೆ.
ಭಾರತದ ಪುರುಷರ ಹಾಕಿ ತಂಡ ಒಲಿಂಪಿಕ್ಸ್ನಲ್ಲಿ ಕಂಚಿನ ಪದಕ ಗೆದ್ದು ಸಾಧನೆ ಮೆರೆದಿದೆ. ಒಲಿಂಪಿಕ್ಸ್ನಲ್ಲಿ 41 ವರ್ಷಗಳ ಬಳಿಕ ಭಾರತಕ್ಕೆ ಪದಕ ಬಂದಿದ್ದು, ಆ ಮೂಲಕ ಈ ತಂಡ ಇತಿಹಾಸ ನಿರ್ಮಿಸಿದೆ. ಕಂಚು ಗೆದ್ದ ಆಟಗಾರರಿಗೆ 75 ಲಕ್ಷ ನೀಡುವುದಾಗಿ ಈ ಹಿಂದೆಯೇ ಸರ್ಕಾರ ಘೋಷಿಸಿದ್ದು, ಅದರಂತೆ ರಾಜ್ಯದ ಆಟಗಾರ ನೀಲಕಂಠ ಶರ್ಮಾ ಅವರಿಗೆ ನಗದು ಮತ್ತು ಸರ್ಕಾರಿ ಉದ್ಯೋಗ ನೀಡುವುದಾಗಿ ಮುಖ್ಯಮಂತ್ರಿ ಬಿರೆನ್ ಸಿಂಗ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.