ಬೆಂಗಳೂರು: ಟೊಕಿಯೋ ಒಲಿಂಪಿಕ್ಸ್ 2020 ರ ಗಾಲ್ಫ್ ಸ್ಪರ್ಧೆಯಲ್ಲಿ ಕರ್ನಾಟಕದ ಹುಡುಗಿ ಅದಿತಿ ಅಶೋಕ್ ಉತ್ತಮ ಪ್ರದರ್ಶನ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಅದಿತಿ ಅಶೋಕ್ ಅವರು ಪದಕ ವಂಚಿತರಾಗಿರಬಹುದು. ಆದರೆ ಅವರು ಭಾರತದ ಕೀರ್ತಿಯನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಏರಿಸಿದ್ದಾರೆ. ಅವರಿಗೆ ಉತ್ತಮ ಭವಿಷ್ಯ ಇದೆ ಎಂದು ಬೊಮ್ಮಾಯಿ ಹೇಳಿದ್ದಾರೆ. ಕರ್ನಾಟಕ ಸರ್ಕಾರ, ಇಡೀ ರಾಜ್ಯವೇ ಅವರ ಜೊತೆಗಿದೆ. ಅವರ ಭವಿಷ್ಯಕ್ಕೆ ಶುಭಹಾರೈಸುವುದಾಗಿ ಬೊಮ್ಮಾಯಿ ಹೇಳಿದ್ದಾರೆ.
ಅದಿತಿ ಅಶೋಕ್ ಅವರು ಸ್ಪರ್ಧೆಯಲ್ಲಿ ಆರಂಭಿಕ ಹಂತಗಳಲ್ಲಿ ಎರಡನೇ ಸ್ಥಾನದಲ್ಲಿದ್ದು, ಆ ಬಳಿಕ ನಡೆದ ಪಂದ್ಯಗಳಲ್ಲಿ 4 ನೇ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.
'Congratulations to Karnataka's daughter Aditi Ashok for finishing 4th at #Tokyo2020. The young Indian Golfer deserves a pat on the back for putting India on the International #Golf map. You have a bright future ahead @aditigolf. Best wishes for future endeavours' : CM @BSBommai. pic.twitter.com/RzHp62RZBJ
— CM of Karnataka (@CMofKarnataka) August 7, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.