ಹಾವೇರಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ “ಜಲಜೀವನ್ ಮಿಷನ್” ಅನ್ನು ನಿಗದಿತ ಅವಧಿಯೊಳಗೆ ಮುಗಿಸುವಂತೆ ಹಾವೇರಿ ಉಸ್ತುವಾರಿ, ಕೃಷಿ ಸಚಿವ ಬಿ.ಸಿ. ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನಲ್ಲಿ ರಾಜ್ಯದ ಗ್ರಾಮೀಣ ಭಾಗದ ಪ್ರತಿ ಮನೆಗೆ ನಲ್ಲಿ ನೀರಿನ ಸಂಪರ್ಕ ಕಲ್ಪಿಸುವ ಜಲಜೀವನ್ ಮಿಷನ್ ಯೋಜನೆಗೆ ಹಿರೇಕೆರೂರು ಮತಕ್ಷೇತ್ರದ ರಟ್ಟಿಹಳ್ಳಿ, ಇಂಗಳಗೊಂದಿ, ಸತ್ತಗಿಹಳದಳಿ, ಶಿರಗಂಬಿ ಗ್ರಾಮಗಳಲ್ಲಿ ಭೂಮಿಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಕರ್ನಾಟಕದ ಜಲಜೀವನ್ ಮಿಷನ್ ಕಾರ್ಯಕ್ರಮವನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವುದು ಸೇರಿದಂತೆ, ಗುಣಮಟ್ಟದ ಕಾಮಗಾರಿ ಹಾಗೂ ನೀರು ಪೂರೈಸುವಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ರಾಜ್ಯ ಸರ್ಕಾರಕ್ಕೆ ಖಡಕ್ ಸೂಚನೆ ನೀಡಿದ್ದಾರೆ. ಜಲಜೀವನ್ ಮಿಷನ್ ಯೋಜನೆ ಮೂಲಕ 2024 ರ ವೇಳೆಗೆ ದೇಶದ ಒಟ್ಟು 18.93 ಕೋಟಿ ಗ್ರಾಮೀಣ ಪ್ರದೇಶದ ಮನೆಗಳಲ್ಲಿ 15.70 ಕೋಟಿ ಮನೆಗಳಿಗೆ ಕ್ರಿಯಾತ್ಮಕ ನಳ ಸಂಪರ್ಕ ನೀಡುವ ಗುರಿ ಹೊಂದಲಾಗಿದೆ. ಈ ಯೋಜನೆಯಡಿ ಕೇವಲ ಸೌಲಭ್ಯ ಕಲ್ಪಿಸುವುದು ಮಾತ್ರವಲ್ಲ, ನಿರಂತರವಾಗಿ ಕುಡಿಯುವ ನೀರು ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದರು.
ಯೋಜನೆಯ ಕಾಮಗಾರಿಯನ್ನು ಮುಗಿಸಲು ನಾಲ್ಕು ತಿಂಗಳ ಕಾಲಮಿತಿ ನೀಡಲಾಗಿದ್ದು, ನಿಗದಿತ ಅವಧಿಯೊಳಗೆ ಮುಗಿಸುವ ಜೊತೆಗೆ, ಕಾಮಗಾರಿಯ ಗುಣಮಟ್ಟವನ್ನು ಅಧಿಕಾರಿಗಳು ಪರಿಶೀಲಿಸಿ ಉತ್ತಮ ಗುಣಮಟ್ಟದ ಸೇವೆಯನ್ನು ನೀಡಬೇಕು.ಅಲ್ಲದೇ ಜನರು ಈ ಯೋಜನೆಗೆ ಸಹಕರಿಸಬೇಕೆಂದು ತಿಳಿಸಿದರು.
ರಟ್ಟಿಹಳ್ಳಿ ತಾಲೂಕಿನಲ್ಲಿ ಜಲಜೀವನ್ ಮಿಷನ್ ಅಡಿ ಆರಂಭವಾದ ಈ ಯೋಜನೆಯಿಂದಾಗಿ ಇಂಗಳಗುಂದಿಗೆ 94 ಲಕ್ಷ ರೂ ಅನುದಾನದಲ್ಲಿ 345 ಕುಟುಂಬಗಳಿಗೆ, ಸತ್ತಿಗೆಹಳ್ಳಿ 31.5 ಲಕ್ಷ ರೂಪಾಯಿ ಅನುದಾನದಲ್ಲಿ 150 ಕುಟುಂಬಗಳಿಗೆ ಹಾಗೂ ಶಿರಗುಂಬಿ 1.53 ಕೋಟಿ ರೂ. ಅನುನಾದಡಿ 560 ಕುಟುಂಬಗಳಿಗೆ ಅನುಕೂಲವಾಗಲಿದೆ. ಈ ಯೋಜನೆಯಡಿ ಕೇಂದ್ರದ ಅನುದಾನ 37.5%, ರಾಜ್ಯ ಸರ್ಕಾರದ 37.5% ಹಾಗೂ ಬಾಕಿ ಅನುದಾನ ಗ್ರಾಮ ಪಂಚಾಯತಿ ಹದಿನೈದನೇ ಹಣಕಾಸು ಯೋಜನೆಯಡಿ ಮತ್ತು ಜನರ ವಂತಿಕೆಯಿಂದ ನೀಡಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.