ನವದೆಹಲಿ: ಸ್ವಾತಂತ್ರ್ಯ ದಿನದಲ್ಲಿ ಜೈವಿಕ ವಿಘಟನೆಗೆ ಸಾಧ್ಯವಾಗದ ಪ್ಲಾಸ್ಟಿಕ್ ತ್ರಿವರ್ಣ ಧ್ವಜಗಳನ್ನು ಬಳಕೆ ಮಾಡದಂತೆ ಸಾರ್ವಜನಿಕರು ಎಚ್ಚರ ವಹಿಸಬೇಕು ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.
ರಾಷ್ಟ್ರಧ್ವಜ ಅತ್ಯಂತ ಗೌರವಯುತವಾದ ವಿಚಾರ. ಅದು ದೇಶದ ಜನರ ಭರವಸೆ, ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತದೆ. ರಾಷ್ಟ್ರ ಧ್ವಜಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಮತ್ತು ಸರ್ಕಾರದ ಸಂಸ್ಥೆಗಳು ಹೆಚ್ಚು ಎಚ್ಚರಿಕೆ ವಹಿಸಬೇಕು. ಪ್ಲಾಸ್ಟಿಕ್ ಧ್ವಜಗಳು ವಿಘಟನೆಯಾಗುವುದಿಲ್ಲ. ದೀರ್ಘಕಾಲ ಕೊಳೆಯುವುದಿಲ್ಲ. ಹಾಗಾಗಿ ಜೈವಿಕ ಪರಿಸರಕ್ಕೆ ಹಾನಿಯಾಗದ ತ್ರಿವರ್ಣ ಧ್ವಜಗಳನ್ನು ಬಳಕೆ ಮಾಡುವ ಮೂಲಕ ಸ್ವಾತಂತ್ರ್ಯ ದಿನವನ್ನು ಆಚರಿಸುವಂತೆ ಸಚಿವಾಲಯ ತಿಳಿಸಿದೆ.
ಪ್ಲಾಸ್ಟಿಕ್ ವಿಲೇವಾರಿ ದೇಶದ ಬಹುದೊಡ್ಡ ಸವಾಲುಗಳಲ್ಲಿ ಒಂದು. ಆದ್ದರಿಂದ ಪ್ರಮುಖ ರಾಷ್ಟ್ರೀಯ, ಕ್ರೀಡಾ, ಸಾಂಸ್ಕೃತಿಕ ಸೇರಿದಂತೆ ಇನ್ನಿತರ ಸಮಾರಂಭಗಳಲ್ಲಿ ಜೈವಿಕ ವಿಘಟನೆಗೆ ಪೂರಕವಾಗಿ ಕಾಗದದ ಧ್ವಜಗಳನ್ನು ಬಳಕೆ ಮಾಡುವಂತೆ ಭಾರತೀಯ ಧ್ವಜ ಸಂಹಿತೆ -2002 ಮತ್ತು ನಿಬಂಧನೆಗಳು ತಿಳಿಸುತ್ತದೆ. ಆದ್ದರಿಂದ ಪ್ಲಾಸ್ಟಿಕ್ ಧ್ವಜಗಳನ್ನು ಬಳಕೆ ಮಾಡದಂತೆ ದೇಶವಾಸಿಗಳಿಗೆ ಕೇಂದ್ರ ಗೃಹಸಚಿವಾಲಯ ಮನವಿ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.