ಬೆಂಗಳೂರು: ವೈದ್ಯಕೀಯ ಶಿಕ್ಷಣದಲ್ಲಿ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ 10% ಮೀಸಲಾತಿಯ ಕೇಂದ್ರ ಸರ್ಕಾರದ ನಿರ್ಣಯವನ್ನು ರಾಜ್ಯದಲ್ಲಿಯೂ ಅನುಷ್ಠಾನ ಮಾಡಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.
ಪ್ರಧಾನಿ ಮೋದಿ ಸರ್ಕಾರದ ಈ ನಿರ್ಣಯವನ್ನು ರಾಜ್ಯದಲ್ಲಿಯೂ ಅಳವಡಿಸಲು ಇತ್ತೀಚೆಗೆ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಸಂಬಂಧ ಸದ್ಯದಲ್ಲೇ ರಾಜ್ಯ ಸರ್ಕಾರ ಆದೇಶ ಹೊರಡಿಸಲಿದೆ ಎಂದು ಅವರು ಹೇಳಿದ್ದಾರೆ.
ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಮೀಸಲಾತಿ ನೀಡುವುದರಿಂದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಉನ್ನತ ಶಿಕ್ಷಣದ ಕನಸು ನನಸಾಗಿಸಿಕೊಳ್ಳಲು ಸಾಧ್ಯವಿದೆ ಎಂದು ಅವರು ತಿಳಿಸಿದ್ದಾರೆ. ದೇಶದ ಎಲ್ಲ ವರ್ಗಗಳ ಬಡ ವಿದ್ಯಾರ್ಥಿಗಳಿಗೂ ಶೈಕ್ಷಣಿಕ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಣಯವನ್ನು ಕೆಲ ದಿನಗಳ ಹಿಂದಷ್ಟೇ ಪ್ರಕಟಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.