ನವದೆಹಲಿ: ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಪಾಲ್ಗೊಂಡು ದೇಶದ ಸ್ವಾತಂತ್ರ್ಯಕ್ಕಾಗಿ ಶ್ರಮಪಟ್ಟ ಹಿರಿಯ ಚೇತನಗಳಿಗೆ ಪ್ರಧಾನಿ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.
ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂದು ಕ್ವಿಟ್ ಇಂಡಿಯಾ ಚಳುವಳಿಯನ್ನು ದೇಶದ ಸ್ವಾತಂತ್ರ್ಯಕ್ಕಾಗಿ ನಡೆಸಲಾಗಿದ್ದು, ಆ ಚಳುವಳಿಗೆ 79 ವರ್ಷಗಳಾಗಿವೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಈ ಚಳುವಳಿ ಭಾರತದಾದ್ಯಂತ ಪ್ರತಿಧ್ವನಿಯಂತೆ ಮೊಳಗುವ ಜೊತೆಗೆ, ನಮ್ಮ ದೇಶದ ಯುವ ಸಮೂಹಕ್ಕೆ ಶಕ್ತಿ ತುಂಬಿದಂತಹ ಆಂದೋಲನವಾಗಿದೆ. ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಪಾಲ್ಗೊಂಡ ಶ್ರೇಷ್ಠರಿಗೆ ಗೌರವ ನಮನಗಳು. ಈ ಚಳುವಳಿ ವಸಾಹತುಶಾಹಿ ವಿರುದ್ಧದ ಹೋರಾಟವನ್ನು ಬಲಪಡಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದೆ ಎಂದು ಅವರು ತಿಳಿಸಿದ್ದಾರೆ.
ಗಾಂಧೀಜಿ ಅವರ ನೇತೃತ್ವದಲ್ಲಿ ಕ್ವಿಟ್ ಇಂಡಿಯಾ ಚಳುವಳಿ ಆರಂಭಿಸಲಾಯಿತು. ಐದು ವರ್ಷಗಳ ನಂತರ ದೇಶಕ್ಕೆ ಸ್ವತಂತ್ರ ಸಿಕ್ಕಿತು. ದೇಶದ ಸ್ವಾತಂತ್ರ್ಯದಲ್ಲಿ ಈ ಚಳವಳಿ ಮಹತ್ವದ ಪಾತ್ರ ವಹಿಸಿದೆ ಎಂದು ಅವರು ತಿಳಿಸಿದ್ದಾರೆ.
Tributes to the greats who took part in the Quit India Movement, which played a crucial role in strengthening the fight against colonialism. Inspired by Mahatma Gandhi, the spirit of the Quit India movement reverberated across India and energised the youth of our nation.
— Narendra Modi (@narendramodi) August 9, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.