ಬೆಂಗಳೂರು: ಪ್ರೌಢ ಶಾಲೆ, ಪಿಯುಸಿಗಳಿಗೆ ರಾಜ್ಯದಲ್ಲಿ ನೇಯ ತರಗತಿಗಳು ಆಗಸ್ಟ್ 23 ರಿಂದ ಆರಂಭವಾಗಲಿದ್ದು, ವಿದ್ಯಾರ್ಥಿಗಳ ಸುರಕ್ಷತೆಗೆ ವಿಸ್ತೃತ ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು ಶೀಘ್ರ ಬಿಡುಗಡೆ ಮಾಡುವುದಾಗಿ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ.
ಶಾಲಾರಂಭಕ್ಕೆ ಸಂಬಂಧಿಸಿದಂತೆ ತಜ್ಞರ ವರದಿ ಬಂದಿದೆ. ಈ ಮಾಸಾಂತ್ಯದೊಳಗಾಗಿ ಪ್ರಾಥಮಿಕ ಶಾಲಾ ಮಕ್ಕಳ ಶಿಕ್ಷಣಕ್ಕಾಗಿ ಆರಂಭಿಸಲಾದ ವಿದ್ಯಾಗಮ ಯೋಜನೆ ಪುನರಾರಂಭ ಕುರಿತು ತೀರ್ಮಾನ ಕೈಗೊಳ್ಳುವುದಾಗಿ ಅವರು ಹೇಳಿದ್ದಾರೆ.
ರಾಜ್ಯದಲ್ಲಿ 5600 ಪದವಿ ಪೂರ್ವ ಕಾಲೇಜುಗಳಿವೆ. 12 ಲಕ್ಷ ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆಯಲು ಅವಕಾಶ ಇದೆ. ಈ ಬಾರಿ ಸರ್ಕಾರಿ ಪ್ರೌಢಶಾಲೆಗಳ ಉನ್ನತೀಕರಣ ಕಾರ್ಯ ನಡೆಯುತ್ತಿದೆ. ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಪ್ರವೇಶಾತಿಗೆ ಅನುಕೂಲ ಕಲ್ಪಿಸುವುದಾಗಿ ತಿಳಿಸಿದ್ದಾರೆ. 84% ಗಳಷ್ಟು ಶಿಕ್ಷಕರು ಕೊರೋನಾ ಲಸಿಕೆ ಪಡೆದಿದ್ದಾರೆ. 19% ಶಿಕ್ಷಕರಿಗೆ ಎರಡೂ ಡೋಸ್ ಲಸಿಕೆ ನೀಡಲಾಗಿದೆ. ಉಳಿದ ಶಿಕ್ಷಕರಿಗೆ ಆಗಸ್ಟ್ 23 ರೊಳಗಾಗಿ ಲಸಿಕೆ ನೀಡಲು ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.