ಬೆಂಗಳೂರು: ರಾಜ್ಯ ಸರ್ಕಾರದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಸಚಿವ ಸುನಿಲ್ ಕುಮಾರ್ ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜವಾಬ್ದಾರಿ ಸ್ವೀಕರಿಸಿದ್ದಾರೆ.
ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮೆಟ್ಟಿಲುಗಳ ಮೇಲೆ ಕುಳಿತು ಕಡತಕ್ಕೆ ಸಹಿ ಹಾಕುವ ಮೂಲಕ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಬಳಿಕ ಸಿರಿಗನ್ನಡ ಪುಸ್ತಕ ಮಳಿಗೆಗಳಿಂದ ಪುಸ್ತಕ ಖರೀದಿಸಿ, ಆ ಬಳಿಕ ಕಲಾಕ್ಷೇತ್ರದ ಕ್ಯಾಂಟೀನ್ನಲ್ಲಿ ಸಾಹಿತಿಗಳು ಮತ್ತು ಕಲಾವಿದರ ಜೊತೆಗೆ ಚರ್ಚಿಸುತ್ತಾ ಕಾಫಿ ಸೇವನೆ ಮಾಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಚಿವರು ರವೀಂದ್ರ ಕಲಾ ಕ್ಷೇತ್ರದ ಮೆಟ್ಟಿಲುಗಳಲ್ಲಿ ಕೂತು ಕಡತಕ್ಕೆ ಸಹಿ ಮಾಡುವ ಮೂಲಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜವಾಬ್ದಾರಿ ಸ್ವೀಕಾರ. ಈ ಸಂದರ್ಭದಲ್ಲಿ ಪುಸ್ತಕ ಖರೀದಿಸಿ ಸಾಹಿತಿಗಳು ಹಾಗೂ ಕಲಾವಿದರೊಂದಿಗೆ ಕಾಫಿ ಸೇವನೆ ಮಾಡಿದೆ.
ರವೀಂದ್ರ ಕಲಾ ಕ್ಷೇತ್ರದ ಮೆಟ್ಟಿಲುಗಳಲ್ಲಿ ಕೂತು ಕಡತಕ್ಕೆ ಸಹಿ ಮಾಡುವ ಮೂಲಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜವಾಬ್ದಾರಿ ಸ್ವೀಕಾರ. ಈ ಸಂದರ್ಭದಲ್ಲಿ ಪುಸ್ತಕ ಖರೀದಿಸಿ ಸಾಹಿತಿಗಳು ಹಾಗೂ ಕಲಾವಿದರೊಂದಿಗೆ ಕಾಫಿ ಸೇವನೆ ಮಾಡಿದೆ.#kannada #Karnataka @BSBommai @JPNadda @narendramodi @nalinkateel @blsanthosh pic.twitter.com/BAnRq5NPLN
— Sunil Kumar Karkala (@karkalasunil) August 11, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.