ಬೆಂಗಳೂರು: ರಾಜ್ಯದೆಲ್ಲೆಡೆ ಉದ್ಯಮಗಳ ಸ್ಥಾಪನೆ ಮತ್ತು ವಿಸ್ತರಣೆ ರಾಜ್ಯ ಸರ್ಕಾರದ ಗುರಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ರಾಜ್ಯವು ಕೈಗಾರಿಕಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ದೇಶದ ಸ್ವಾತಂತ್ರ್ಯದ ಬಳಿಕ ಕೌಶಲ, ಸಂಶೋಧನೆ, ಅಭಿವೃದ್ಧಿ ಕ್ಷೇತ್ರದಲ್ಲಿ ವಿದೇಶಿ ಸಹಯೋಗಕ್ಕೆ ಭದ್ರ ಬುನಾದಿ ಹಾಕಲಾಗಿದೆ. ಸಂಪೂರ್ಣ ರಾಜ್ಯದಲ್ಲಿ ಉದ್ಯಮಗಳ ವಿಸ್ತರಣೆ ರಾಜ್ಯ ಸರ್ಕಾರದ ಆದ್ಯತೆ ಎಂದು ಅವರು ತಿಳಿಸಿದ್ದಾರೆ.
ಅಭಿವೃದ್ಧಿಗೆ ಪೂರಕವಾಗುವಂತೆ ರಾಜ್ಯವನ್ನು ದೊಡ್ಡ ಸಂಪನ್ಮೂಲ ಶಕ್ತಿಯಾಗಿ ಪರಿವರ್ತನೆ ಮಾಡಲಾಗುತ್ತದೆ. ರಾಜ್ಯದ ಜನರ ಸಬಲೀಕರಣದ ದೃಷ್ಟಿಯಿಂದ ಸರ್ಕಾರ ಕೆಲಸ ಮಾಡುತ್ತಿದೆ. ಮಾನವ ಸಂಪನ್ಮೂಲಗಳ ಸಶಕ್ತೀಕರಣದ ಜೊತೆಗೆ, ಪ್ರಾದೇಶಿಕ ಅಸಮಾನತೆ ನಿರ್ಮೂಲನೆಗೂ ಪ್ರಾಶಸ್ತ್ಯ ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ರಫ್ತಿಗೆ ಸಂಬಂಧಿಸಿದಂತೆ ಸಂಪೂರ್ಣ ದೇಶದಲ್ಲಿ ಕರ್ನಾಟಕವೇ ಮುಂಚೂಣಿಯಲ್ಲಿರಬೇಕು. ಈ ನಿಟ್ಟಿನಲ್ಲಿ ಗುಣಮಟ್ಟದ ರಫ್ತು ಕೇಂದ್ರಿತ ಸಂಸ್ಥೆಗಳು ರಾಜ್ಯದಲ್ಲಿ ಹೂಡಿಕೆ ಮಾಡುವಂತಾಗಬೇಕು. ಈ ನಿಟ್ಟಿನಲ್ಲಿ ನಿಯಮಗಳನ್ನು ಸರಳೀಕರಿಸುವ ಮೂಲಕ ಹೂಡಿಕೆಗಳಿಗೆ ಹೆಚ್ಚು ಅವಕಾಶ ಕಲ್ಪಿಸಿರುವುದಾಗಿ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.