ನವದೆಹಲಿ: ಒಬಿಸಿ ತಿದ್ದುಪಡಿ ಮಸೂದೆ ಸಂಸತ್ತಿನ ಉಭಯ ಸದನಗಳಲ್ಲಿಯೂ ಅಂಗೀಕಾರಗೊಂಡಿದ್ದು, ಇದಕ್ಕೆ ಪ್ರಧಾನಿ ಮೋದಿ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ದೇಶದ ಇತರ ಹಿಂದುಳಿದ ವರ್ಗಗಳನ್ನು ಗುರುತಿಸುವ ವಿಚಾರದಲ್ಲಿ ಅವಕಾಶವನ್ನು, ನ್ಯಾಯವನ್ನು ಖಾತ್ರಿ ಪಡಿಸುವ ತಮ್ಮ ಸರ್ಕಾರದ ಬದ್ಧತೆಯನ್ನು ಇದು ಒತ್ತಿ ಹೇಳುತ್ತದೆ ಎಂದು ತಿಳಿಸಿದ್ದಾರೆ.
Passage of the Constitution (127th Amendment) Bill, 2021 in both Houses is a landmark moment for our nation. This Bill furthers social empowerment. It also reflects our Government’s commitment to ensuring dignity, opportunity and justice to the marginalised sections.
— Narendra Modi (@narendramodi) August 11, 2021
ರಾಜ್ಯಗಳು ಮತ್ತು ಒಬಿಸಿ ಪಟ್ಟಿಗಳನ್ನು ಮಾಡುವ ಅಧಿಕಾರವನ್ನು ಮರುಸ್ಥಾಪಿಸುವ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಬುಧವಾರ ಅಂಗೀಕಾರ ಮಾಡಲಾಗಿದೆ. ವಿರೋಧ ಪಕ್ಷಗಳು ಸಹ ಈ ಮಸೂದೆಗೆ ತಮ್ಮ ಬೆಂಬಲ ಸೂಚಿಸಿವೆ. ರಾಜ್ಯ ಸರ್ಕಾರಗಳಿಗೆ ಸಾಮಾಜಿಕ, ಶೈಕ್ಷಣಿಕ ಮತ್ತು ಉದ್ಯೋಗ ಮೀಸಲಾತಿಗಳನ್ನು ಹಿಂದುಳಿದ ವರ್ಗಗಳಿಗೆ ಪ್ರವೇಶ ನೀಡುವ ಹಕ್ಕು ಇರುವುದಿಲ್ಲ. ಸಂವಿಧಾನದ 12 ನೇ ತಿದ್ದುಪಡಿಯಲ್ಲಿಯೂ ಇದರ ಉಲ್ಲೇಖ ಇದೆ. ಸಂವಿಧಾನದ 102 ನೇ ತಿದ್ದುಪಡಿಯ ನಿಬಂಧನೆಗಳನ್ನು ಸ್ಪಷ್ಟಪಡಿಸಲು ಈ ಮಸೂದೆ ಮಂಡನೆ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.