ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಹಿಂಸೆಗೆ ತುತ್ತಾಗಿ ಓಡಿ ಹೋದ ಹಿಂದೂ ಧರ್ಮೀಯರ ಪೂರ್ವಜರ ಆಸ್ತಿಯನ್ನು ಉಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಈಗಾಗಲೇ ಭಯೋತ್ಪಾದಕರ ದಾಳಿಗೆ ತುತ್ತಾಗಿ ಬೇರೆಡೆಗೆ ವಲಸೆ ಹೋಗಿದ್ದ ಕಾಶ್ಮೀರ ಪಂಡಿತರ 9 ಕುಟುಂಬಗಳಿಗೆ ತಮ್ಮ ಪೂರ್ವಜರ ಆಸ್ತಿಯನ್ನು ಹಸ್ತಾಂತರ ಮಾಡಲಾಗಿದೆ. ಹಾಗೆಯೇ ಕಾಶ್ಮೀರದಿಂದ ಬೇರೆ ಕಡೆಗಳಿಗೆ ತೆರಳಿದ್ದ ಹಿಂದೂಗಳನ್ನು ಮತ್ತೆ ತಮ್ಮ ತವರಿಗೆ ಕರೆತರುವ ನಿಟ್ಟಿನಲ್ಲಿಯೂ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವ ನಿತ್ಯಾನಂದ ರಾಯ್ ಹೇಳಿದ್ದಾರೆ.
ಜಮ್ಮು ಕಾಶ್ಮೀರ ರಾಜ್ಯದಲ್ಲಿ ವಲಸೆ ಸ್ಥಿರಾಸ್ತಿ (ಸಂರಕ್ಷಣೆ, ಸಂಕಷ್ಟದ ಮಾರಾಟದಿಂದ ರಕ್ಷಣೆ ಮತ್ತು ನಿರ್ಬಂಧ) ಕಾಯ್ದೆ 1997 ರ ಅಡಿಯಲ್ಲಿ ಜಮ್ಮು ಕಾಶ್ಮೀರದ ಜಿಲ್ಲೆಗಳಲ್ಲಿನ ಮ್ಯಾಜಿಸ್ಟ್ರೇಟ್ಗಳು ವಲಸಿಎರ ಸ್ಥಿರಾಸ್ತಿಗೆ ಕಾನೂನಾತ್ಮಕವಾಗಿ ಪಾಲಕರಾಗಿದ್ದು, ಒತ್ತುವರಿ, ತೆರವು ಕಾರ್ಯಾಚರಣೆಯಲ್ಲಿ ಸ್ವಯಂ ಪ್ರೇರಿತರಾಗಿ ಪಾಲ್ಗೊಳ್ಳಲಿದ್ದಾರೆ. ವಲಸೆ ಹೊಂದಿದವರು ತಮ್ಮ ಮೂಲ ಆಸ್ತಿಗೆ ಸಂಬಂಧಿಸಿದಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್ಗಳನ್ನು ಸಂಪರ್ಕ ಮಾಡಬಹುದು ಎಂದು ಅವರು ಹೇಳಿದ್ದಾರೆ.
ಈಗಾಗಲೇ 9 ಆಸ್ತಿಗಳನ್ನು ಅದರ ಮೂಲ ಮಾಲೀಕರಿಗೆ ಹಸ್ತಾಂತರ ಮಾಡಲಾಗಿದೆ. ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ಧತಿ ಬಳಿಕ ಈ ವರೆಗೆ 520 ವಲಸಿಗರು ತಮ್ಮ ತವರಿಗೆ ವಾಪಾಸಾಗಿದ್ದಾರೆ. ಹಾಗೆಯೇ ಪ್ರಧಾನ ಮಂತ್ರಿ ಅಭಿವೃದ್ಧಿ ಪ್ಯಾಕೇಜ್- 2015 ರ ಅಡಿಯಲ್ಲಿ ಉದ್ಯೋಗವನ್ನು ಪಡೆದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.