ನವದೆಹಲಿ: ಅಂತರಾಷ್ಟ್ರೀಯ ಯುವ ದಿನಾಚರಣೆ 2021 ರ ಹಿನ್ನೆಲೆಯಲ್ಲಿ 2017 – 18, 2018 – 19 ನೇ ಸಾಲಿನ ರಾಷ್ಟ್ರೀಯ ಯುವ ಪ್ರಶಸ್ತಿಗಳನ್ನು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಪ್ರದಾನಿಸಿದ್ದಾರೆ.
ವೈಯಕ್ತಿಕ ಮತ್ತು ಸಾಂಸ್ಥಿಕ ವಿಭಾಗಗಳಿಗೆ ಸಂಬಂಧಿಸಿದಂತೆ ಒಟ್ಟು 22 ರಾಷ್ಟ್ರೀಯ ಯುವ ಪ್ರಶಸ್ತಿಗಳನ್ನು ನೀಡಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಶಸ್ತಿಗೆ ಭಾಜನರಾದವರು ಯಶಸ್ಸಿನ ಮತ್ತಷ್ಟು ಮೆಟ್ಟಿಲುಗಳನ್ನು ಏರುವಂತೆ ಅವರು ಹಾರೈಸಿದರು. ಪ್ರಧಾನಿ ಮೋದಿ ಅವರ ಆತ್ಮನಿರ್ಭರದ ದೃಷ್ಟಿಕೋನಗಳಿಗೆ ಇಂತಹ ಯಶಸ್ಸುಗಳು ವೇಗ ನೀಡುತ್ತದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ದೇಶದಲ್ಲಿ ಆರಂಭವಾದ ಸ್ಟಾರ್ಟ್ಅಪ್ಗಳು ತಾಂತ್ರಿಕ ಆವಿಷ್ಕಾರಗಳ ಜೊತೆಗೆ ಭಾರತವನ್ನು ಜಗತ್ತಿನ ಮುಂದೆ ತೆರೆದಿಡುತ್ತದೆ ಎಂದು ಅವರು ತಿಳಿಸಿದರು.
ಶಿಕ್ಷಣ, ಕೃಷಿ, ಆರೋಗ್ಯ ಕ್ಷೇತ್ರಗಳಲ್ಲಿ ಪರಿಸ್ಥಿತಿ ಸುಧಾರಣೆಗಾಗಿ ಯುವಜನರ ಪ್ರಯತ್ನಗಳನ್ನು ಅವರು ಶ್ಲಾಘಿಸಿದರು. ನಾವಿನ್ಯತೆಯ ಮೂಲಕ ಮತ್ತಷ್ಟು ಅಭಿವೃದ್ಧಿ ಸಾಧಿಸಲು ದೇಶಕ್ಕೆ ಸಹಕಾರ ನೀಡುವಂತೆಯೂ ಅವರು ಪ್ರಶಸ್ತಿ ವಿಜೇತ ಯುವಜನರಿಗೆ ಮನವಿ ಮಾಡಿದರು.
ಈ ಪ್ರಶಸ್ತಿಯು ಪದಕ, ಪ್ರಮಾಣ ಪತ್ರ, ವ್ಯಕ್ತಿಗೆ 1 ಲಕ್ಷ ರೂ. ನಗದು ಮತ್ತು ಸಂಸ್ಥೆಗೆ 3 ಲಕ್ಷ ರೂ. ನಗದು ಬಹುಮಾನಗಳನ್ನು ಒಳಗೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.