ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ 23 ರಿಂದ 9 – 12 ನೇ ತರಗತಿಗಳು ಆರಂಭವಾಗಲಿದ್ದು, ಅದನ್ನು ಅವಲೋಕಿಸಿ ಸೆಪ್ಟೆಂಬರ್ ತಿಂಗಳಲ್ಲಿ 1 – 8 ನೇ ತರಗತಿ ಆರಂಭ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ.
23 ರಿಂದ ಆರಂಭವಾಗುವ ಭೌತಿಕ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಎಸ್ಒಪಿ ಬಿಡುಗಡೆ ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಪೋಷಕರಿಂದ 1 – 8 ನೇ ತರಗತಿ ಆರಂಭಕ್ಕೆ ಒತ್ತಡ ಬರುತ್ತಿದೆ. ತರಗತಿಗಳನ್ನು ಆರಂಭ ಮಾಡಬೇಕು ಎಂಬ ಆಲೋಚನೆಯೂ ನಮಗಿದೆ. ಮಕ್ಕಳಿಗೆ ಕೊರೋನಾ ಸೋಂಕಿನಿಂದ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. 9 – 12 ನೇ ತರಗತಿ ವರೆಗಿನ ಪ್ರತಿಕ್ರಿಯೆ ಗಮನಿಸಿ ಬಳಿಕ ತೀರ್ಮಾನ ಕೈಗೊಳ್ಳುವುದಾಗಿ ಅವರು ಹೇಳಿದ್ದಾರೆ. ಈ ಸಂಬಂಧ ಆಗಸ್ಟ್ 30 ರಂದು ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.