ಬೆಂಗಳೂರು: ನಗರದಲ್ಲಿ ಭಯೋತ್ಪಾದಕ ದಾಳಿ ಸಂಭವಿಸಿದರೆ, ಅಂತಹ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ತಡೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ಎರಡು ಸ್ಟಾಟ್ ತಂಡಗಳನ್ನು ಸೇರ್ಪಡೆ ಮಾಡಲಾಗಿದೆ.
ಈ ತಂಡಗಳಿಗೆ ಎರಡು ತಿಂಗಳುಗಳ ಕಾಲ ಕಮಾಂಡೋ ತರಬೇತಿಯನ್ನು ಸಹ ನೀಡಲಾಗಿದೆ. ಪ್ರತಿ ಜಿಲ್ಲೆಗೆ ಸಂಬಂಧಿಸಿದಂತೆಯೂ ಸ್ಟಾಟ್ ತಂಡಗಳನ್ನು ಪೊಲೀಸ್ ಇಲಾಖೆ ಸಜ್ಜುಗೊಳಿಸುತ್ತಿದೆ. ನಗರದಲ್ಲಿ ಯಾವುದೇ ಭಯೋತ್ಪಾದಕ ದಾಳಿ ಸಂಭವಿಸಿದಾಗಲೂ, ಗರುಡ ಪಡೆ ಬರುವ ಮೊದಲೇ ಈ ತಂಡ ಕಾರ್ಯಾಚರಣೆ ನಡೆಸಲಿದೆ. ಇದಕ್ಕಾಗಿ ಸಿಎಆರ್ ಘಟಕಗಳ ಸಿಬ್ಬಂದಿಗಳನ್ನು ಆಯ್ಕೆ ಮಾಡಲಾಗಿದೆ.
64 ಮಂದಿ ತರಬೇತಿ ಪಡೆದ ಸಿಬ್ಬಂದಿಗಳನ್ನು ಎರಡು ತಂಡಗಳಾಗಿ ನಿಯೋಜಿಸಿ ನಗರದ ಅಗತ್ಯವಿರುವ ಪ್ರದೇಶಗಳಿಗೆ ಕಳುಹಿಸಲಾಗಿದೆ. ನಗರದ ಎಲ್ಲಾ ಎಂಟು ವಿಭಾಗಗಳಲ್ಲಿ ಒಂದು ತಂಡವನ್ನು ನಿಯೋಜನೆ ಮಾಡಲು ಚಿಂತನೆ ನಡೆಸಲಾಗಿದೆ. ಸ್ಟನ್ ಗ್ರೆನೇಡ್ಗಳು, ಮೆಷಿನ್ ಗನ್ಗಳು, ಇತರ ಶಸ್ತ್ರಾಸ್ತ್ರಗಳ ಬಗ್ಗೆ ಗರುಡ ಪಡೆಯಿಂದ ಈ.ತಂಡಕ್ಕೆ ತರಬೇತಿ ನೀಡಲಾಗಿದೆ. ಕಟ್ಟಡ, ಚಲಿಸುವ ವಾಹನಗಳಲ್ಲಿ ಒತ್ತೆಯಾಳುಗಳನ್ನು ನಿಭಾಯಿಸುವ ಬಗೆಗೂ ಈ ತಂಡಗಳಿಗೆ ತರಬೇತಿ ನೀಡಲಾಗಿದೆ.
ಈ ತಂಡಗಳನ್ನು ಅಂತರಾಷ್ಟ್ರೀಯ ಮಹತ್ವದ ಕಾರ್ಯಕ್ರಮಗಳಿಗೆ ಭದ್ರತೆ ಒದಗಿಸಲು, ಉಗ್ರ ವಿರೋಧಿ, ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಸಂಬಂಧಿಸಿದಂತೆಯೂ ತರಬೇತಿ ಒದಗಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.